ಕಾರವಾರ:ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಜಿನೇವಾ ಒಪ್ಪಂದ ದಿನಾಚರಣೆ ಹಾಗೂ ರಕ್ತಗುಂಪು ವರ್ಗೀಕರಣ ಕಾರ್ಯಕ್ರಮ

Source: so english | By Arshad Koppa | Published on 13th August 2017, 10:41 AM | Coastal News | Special Report |

ಕಾರವಾರ,12-8-17: ರಕ್ತದಾನದ ಮಹತ್ವವನ್ನು ಸಾರುವ ಜಿನೇವಾ ಒಪ್ಪಂದ ದಿನಾಚರಣೆಯನ್ನು ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ದಿನಾಂಕ 12-8-17ರಂದು ಆಚರಿಸಲಾಯಿತು.  ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ  ಕಾಲೇಜಿನ ರೆಡಕ್ರಾಸ್ ಯೂತ್‍ವಿಂಗ್ ನ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಈ ಕಾರ್ಯಕ್ರಮವನ್ನು  ಡಾ.ಕೆ.ಆನಂದ್ IAS ಪ್ರೊಬೇಶನರಿ ಅಧಿಕಾರಿಗಳು ಉತ್ತರಕನ್ನಡ ಇವರು ದೀಪಬೆಳಗಿಸಿ ಉದ್ಘಾಟಸಿ, ರಕ್ತದಾನ ಮತ್ತು ರಕ್ತಗುಂಪು ವರ್ಗೀಕರಣ ಬಹಳ ಅವಶ್ಯವಾದುದೆಂದು ಹೇಳಿ, ರಕ್ತದಾನ ಮಾಡಿದ ಪ್ರತಿಯೊಬ್ಬನು ಇನ್ನೊಂದು ಜೀವಕ್ಕೆ ನೆರವಾಗುವುದರ ಬಗ್ಗೆ ಹೆಮ್ಮೆ ಪಡಬೇಕೆಂದು ಹೇಳಿದರು. 

     ಸಮಾರಂಭದ ಅಧ್ಯಕ್ಷತೆ ವಹಿಸಿದ, ಕಾಲೇಜಿನ ಪ್ರಾಂಶುಪಾಲರಾದ ಡಾ. ಕಲ್ಪನಾ ಕೆರವಡಿಕರರವರು ಮಾತನಾಡಿ, ಎಲ್ಲಾ ದಾನಗಳಿಗಿಂತ ರಕ್ತದಾನವೇ ಶ್ರೇಷ್ಠವಾದದ್ದು. ಯುವಕ-ಯುವತಿಯರಲ್ಲಿ ರಕ್ತದಾನದ ಮಹತ್ವ ತಿಳಿಸುವ ಈ ಕಾರ್ಯಕ್ರಮ ಸ್ಪೂರ್ತಿ ನೀಡಲಿ ಎಂದು ಹಾರೈಸಿದರು.  ಜಿಲ್ಲಾ ಆರೋಗ್ಯಾಧಿಕಾರಿಗಳ ಕಛೇರಿಯ ಡಾ. ಶಂಕರ ರಾವ್‍ರವರು ರಕ್ತದಾನದ ಮಹತ್ವವನ್ನು ಮತ್ತು ವಿವಿಧ ರಕ್ತಗುಂಪುಗಳ ಕುರಿತು ಮಾಹಿತಿ ನೀಡಿದರು.  ಕಾರ್ಯಕ್ರಮದ ಆರಂಭದಲ್ಲಿ ಉ.ಕ. ಜಿಲ್ಲಾ ರೆಡ್‍ಕ್ರಾಸ್ ಘಟಕದ ಚೇರಮನ್‍ರಾದ ಶ್ರೀ ವಿ. ಎಮ್. ಹೆಗಡೆಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.  ಭಾರತೀಯ ರೆಡಕ್ರಾಸ್ ಸಂಸ್ಥೆಯ ಕಾರವಾರ ಘಟಕದ ಕಾರ್ಯದರ್ಶಿ ಶ್ರೀ ಜಗದೀಶ್ ಬಿರ್ಕೋಡಿಕರ್‍ರವರು ವಂದನಾರ್ಪಣೆಗೈದರು. ಪ್ರೊಫೆಸರ ವೆಂಕಟೇಶ್ ಗಿರಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.  ವೇದಿಕೆಯಲ್ಲಿ ಕಾಲೇಜಿನ ಯೂನಿಯನ್ ಕಾರ್ಯಧ್ಯಕ್ಷರಾದ ಡಾ. ಯು. ಎನ್. ಶೆಟ್ಟಿ ಮತ್ತು ರೆಡಕ್ರಾಸ್ ಯೂತ್ ವಿಂಗ್ ಸಂಯೋಜಕರಾದ ಡಾ. ಪ್ರೀತಿ ತಲ್ಲೂರ್‍ರವರು ಮತ್ತು ಪ್ರೊಫೆಸರ್ ಶಿವಾನಂದ ಭಟ್ ಉಪಸ್ಥಿತರಿದ್ದರು.  ಸಮಾರಂಭದಲ್ಲಿ ಭಾರತೀಯ ರೆಡಕ್ರಾಸ್ ಘಟಕದ ಸದಸ್ಯರಾದ ಶ್ರೀ ಸದಾನಂದ ನಾಯ್ಕ,  ಶ್ರೀ ಮುರಳಿಧರ್ ಗೋವೆಕರ್, ಶ್ರೀಮತಿ ಖೈರುನ್ನಿಸಾಬೇಗಂ ಭಾಗವಹಿಸಿದ್ದರು.  ಸಭೆಯ ಬಳಿಕ ಕಾಲೇಜಿನ 200 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ತಮ್ಮ ರಕ್ತದ ಗುಂಪಿನ ವರ್ಗೀಕರಣ ಮಾಡಿಸಿಕೊಂಡರು.  ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು ವರ್ಗೀಕರಣ ಕಾರ್ಯವನ್ನು ನಡೆಸಿಕೊಟ್ಟರು.  ಸುಮಾರು 10 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಲು ಮುಂದಾದರು.   
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...