ಕಾರವಾರ:ಎಪ್ರಿಲ್ 18 ರಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ ಠಾಣೆಯ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಕಾರವಾರ ಎಪ್ರಿಲ್ 15 : ಉತ್ತರ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ ಠಾಣೆಯ ಅಧಿಕಾರಿಗಳು ಎಪ್ರಿಲ್ 18 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಪ್ರವಾಸಿ ಮಂದಿರದಲ್ಲಿ ಹಾಗೂ ಮ.3 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ, ಎ. 19 ರಂದು ಬೆಳಗ್ಗೆ 11 ರಿಂದ ಮ. 1 ಗಂಟೆಯವರೆಗೆ ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ಮ.3 ಗಂಟೆಯಿಂದ 4.30 ಗಂಟೆಯವರೆಗೆ ಶಿರಸಿ ಪ್ರವಾಸಿ ಮಂದಿರದಲ್ಲಿ ಮತ್ತು ಎ 20 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1.30 ಗಂಟೆಯವರೆಗೆ ಜೋಯಿಡಾ ಪ್ರವಾಸಿ ಮಂದಿರದಲ್ಲಿ, ಎ.21 ರಂದು ಮ. 12 ಗಂಟೆಯಿಂದ 2 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರದಲ್ಲಿ ಹಾಗೂ ಎ 22 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1.30 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧಿಕ್ಷರು ತಿಳಿಸಿದ್ದಾರೆ.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ ಎಪ್ರೀಲ್ 15 : ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿ ಬರುವ ಅಚವೆ ಮೋತಿಗುಡ್ಡ ಹಿಲ್ಲೂರು ಗುಂಡಬಾಳ, ಅಲಗೇರಿ ಅಂಬೇಡ್ಕರ್ ಕಾಲೋನಿ ಪುರಸಭೆ ಕಂತ್ರಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಪ್ರಿಲ್ 28 ಒಳಗಾಗಿ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಅಂಕೋಲಾ ಇಲ್ಲಿ ಅಗತ್ಯ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಡಿಕರಿಸಿ ಸಲ್ಲಿಸುವಂತೆ ಕೋರಲಾಗಿದೆ