ಕಾರವಾರ: ಸ್ವಚ್ಛ ಸಂಕಲ್ಪ ಸ್ವಚ್ಛ ಸಿದ್ಧಿ ಕುರಿತು ಸ್ಪರ್ಧೆಗಳು: ಸಿಇಒ ಚಂದ್ರಶೇಖರ್ ನಾಯಕ

Source: varthabhavan | By Arshad Koppa | Published on 31st August 2017, 7:57 AM | National News | Public Voice |

ಕಾರವಾರ ಆಗಸ್ಟ್ 30: ಸ್ವಚ್ಛ ಸಂಕಲ್ಪ ಮೂಲಕ ಸ್ವಚ್ಛ ಸಿದ್ಧಿ ಕಾರ್ಯಕ್ರಮದಡಿ ಉತ್ತರ ಕನ್ನಡ ಜಿಲ್ಲಾದ್ಯಂತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಚಂದ್ರಶೇಖರ ನಾಯಕ ತಿಳಿಸಿದ್ದಾರೆ.
    ರಾಷ್ಟ್ರದಲ್ಲಿ ನೈರ್ಮಲ್ಯ ಮತ್ತು ಜನಾರೋಗ್ಯ ಕ್ಷೇತ್ರದಲ್ಲಿ ರಾಷ್ಟ್ರವು ಎದುರಿಸುತ್ತಿರುವ ತೀವ್ರ ಸಮಸ್ಯೆಗಳಿಗೆ ಸಾರ್ವಜನಿಕರಿಂದ ಸಲಹೆ, ಮಾರ್ಗದರ್ಶನ ಹಾಗೂ ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪ್ರಬಂಧ ಸ್ಪರ್ಧೆ, ಕಿರುಚಿತ್ರ ಸ್ಪರ್ಧೆ ಹಾಗೂ ಬಣ್ಣದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಮೂರು ಹಂತಗಳಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
    2017 ಸೆಪ್ಟೆಂಬರ್ 3 ಮತ್ತು 4ರಂದು `ಸ್ವಚ್ಛ ಭಾರತಕ್ಕೆ ನಾನು ಏನು ಮಾಡಬೇಕು’ ಎಂಬ ಶೀರ್ಷಿಕೆಯಡಿ ಎಲ್ಲ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು. ಈ ಎಲ್ಲ ಪ್ರಬಂಧಗಳನ್ನು ಸೆಪ್ಟೆಂಬರ್ 5ರಂದು ಕೇಂದ್ರ ಸರ್ಕಾರದ www.mygov.in ವೆಬ್‍ಸೈಟ್‍ನಲ್ಲಿ ಇಂದೀಕರಿಸಲಾಗುವುದು. ಪ್ರಬಂಧವು ಗರಿಷ್ಠ 250 ಪದಗಳನ್ನು ಮೀರಿರಬಾರದು ಎಂದರು.
`ಸ್ವಚ್ಛ ಭಾರತ ನನ್ನ ಕನಸು’ ಶೀರ್ಷಿಕೆಯಡಿ ಸೆಪ್ಟೆಂಬರ್ 5 ಮತ್ತು 6ರಂದು ಎಲ್ಲಾ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬಣ್ಣದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಇದರಲ್ಲಿ 1ರಿಂದ 5ನೇ ತರಗತಿ ಮಕ್ಕಳು ಭಾಗವಹಿಸಲಿದ್ದು, ಸಂಬಂಧಿಸಿದ ಶಾಲಾ ಮುಖ್ಯೋಪಧ್ಯಾಯರು ಬಣ್ಣದ ಚಿತ್ರಗಳನ್ನು ಹಾಗೂ ಪ್ರಬಂಧಗಳನ್ನು ಶೇಖರಿಸಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.
    ಅಂತೆಯೇ, `ಭಾರತದ ಸ್ವಚ್ಛತೆಗೆ ನನ್ನ ಕೊಡುಗೆ’ ಶೀರ್ಷಿಕೆಯಡಿ ಸೆಪ್ಟೆಂಬರ್ 5ರೊಳಗೆ ಪ್ರತಿ ಗ್ರಾಮ ಪಂಚಾಯ್ತಿಯಿಂದ ಕಿರುಚಿತ್ರಗಳ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಪ್ರತಿ ಕಿರುಚಿತ್ರದ ಗರಿಷ್ಠ    ಅವಧಿ 2ರಿಂದ 3 ನಿಮಿಷ ಮೀರಿರಬಾರದು. ಇದರಲ್ಲಿ ಕನಿಷ್ಠ ಒಂದು ಪ್ರಬಂಧ ಹಾಗೂ ವಿಡಿಯೋ ಕಿರುಚಿತ್ರವನ್ನು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ತಾಲೂಕು ಪಂಚಾಯ್ತಿಗೆ ಸಲ್ಲಿಸಬೇಕು. ಸೆ.7ರೊಳಗೆ ಎಲ್ಲ ವಿಡಿಯೋಗಳನ್ನು ಕೇಂದ್ರ ಸರ್ಕಾರದ ವೆಬ್‍ಸೈಟ್ www.mygov.in ಇಲ್ಲಿ ಇಂಧೀಕರಿಸಲಾಗುವುದು.
    
ಈ ಎಲ್ಲ ಪ್ರಕ್ರಿಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಅಧ್ಯಾಪಕರು, ವೃತ್ತಿಪರರು, ಜನಪ್ರತಿನಿಧಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...