ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿ ಅಹ್ವಾನ
ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾಣ ಜಾಣೆಯರ ಬಳಗವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಿಷ್ಠ 5 ರಿಂದ 15 ವಿದ್ಯಾರ್ಥಿಗಳನ್ನೋಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿಯನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ಸಂಪರ್ಕಿಸಲು ಕೋರಿದೆ.
ಸೊಗಸು ಬಹುಮಾನ ಅರ್ಜಿ ಅಹ್ವಾನ
ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ವರ್ಷ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ ಮುಖಪುಟ,ವಿನ್ಯಾಸ ಗುಣಮಟ್ಟವನ್ನು ಪರಿಗಣಿಸಿ ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಕಲಾವಿದರು, ಲೇಖಕರು, ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿದಾರರು ಪುಸ್ತಕದ ಹೆಸರು, ಲೇಖಕರ ಹೆಸರು ಪ್ರಕಟವಾದ ವರ್ಷ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ಸಂಪರ್ಕಿಸಲು ಕೋರಿದೆ.