ಕಾರವಾರ: ಮಹಾತ್ಮರ ಆದರ್ಶಗಳು ಇಂದಿನ ಪೀಳಿಗೆಗೆ ಅತ್ಯಂತ ಪ್ರಸ್ತುತ ಎಂದು ಕಾರವಾರ ಉಪ ವಿಭಾಗಾಧಿಕಾರಿ ಅಭಿಜಿನ್ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಭಗವಾನ್ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶ್ರೀಕೃಷ್ಣ ಸೇರಿದಂತೆ ಇತಿಹಾಸ, ಪುರಾಣಗಳಲ್ಲಿ ಬರುವ ಹಲವಾರು ಮಹಾತ್ಮರು ಉತ್ತಮ ಬದುಕನ್ನು ರೂಪಿಸಿಕೊಳ್ಳುವ ಬಗ್ಗೆ ಹೇಳಿದ್ದಾರೆ. ಅವರ ಆದರ್ಶಗಳು ಇಂದಿನ ಪೀಳಿಗೆಗೆ ಅತ್ಯಂತ ಅವಶ್ಯ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಕೆಟ್ಟ ವಾತಾವರಣ ಸೃಷ್ಟಿಯಾಗಿದೆ. ಮನುಷ್ಯ ಸಂಬಂಧಗಳು ಇಲ್ಲವಾಗಿವೆ. ಮಾನವೀಯ ಮೌಲ್ಯಗಳು ಕುಸಿದಿವೆ. ಅಧರ್ಮ ತಾಂಡವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸತ್ಪುರುಷರ, ಮಹಾಪುರುಷರ ಆದರ್ಶಗಳು ಅಗತ್ಯವಿದೆ. ಇಂದಿನ ಪೀಳಿಗೆ ಅಂತಹ ಮಹಾಕಾವ್ಯಗಳ ಪಾತ್ರಗಳಲ್ಲಿ ಬರುವ ಉತ್ತಮ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕಿದೆ ಎಂದು ಅವರು ಹೇಳಿದರು.
ಶ್ರೀಕೃಷ್ಣ ಜಯಂತಿ ಕುರಿತು ಉಪನ್ಯಾಸ ನೀಡಿದ ಉಪನ್ಯಾಸಕ ಗಣೇಶ್ ಬಿಸ್ಟಣ್ಣನವರ್, ಶ್ರೀಕೃಷ್ಣ ಕೇವಲ ಪಾತ್ರವಾಗಿ ಕಾಣುವುದಿಲ್ಲ. ಮನುಕುಲದ ದಿವ್ಯ ಬೆಳಕು ಎಂದರು.
ಶ್ರೀಕೃಷ್ಣ ಹುಟ್ಟಿನಿಂದಲೇ ಜಗತ್ತಿನ ಕತ್ತಲೆಯನ್ನು ಸರಿಸುತ್ತಾ ಬೆಳೆದರು. ಹಾಲುಗಲ್ಲದ ಹಸುಳೆಯಲ್ಲಿ ರಾಕ್ಷಸಿ ಪೊತನೆಯ ಸಂಹಾರದಿಂದ ಹಿಡಿದು ಅಧರ್ಮದ ಹಾದಿ ಹಿಡಿದ ಮಾವ ಕಂಸ ಸೇರಿದಂತೆ ಸಮಾಜಕ್ಕೆ ಕಂಟಕವಾಗಿದ್ದ ಎಲ್ಲರನ್ನು ಸಂಹರಿಸಿದರು. ಕೆಲವೊಮ್ಮೆ ಶ್ರೀಕೃಷ್ಣನ ಪ್ರಭಾವವೂ ಧರ್ಮ ಸಂಸ್ಥಾಪನೆಗೆ ಕಾರಣವಾಗಿವೆ. ಇಂದಿಗೂ ನಾವು ಆ ಪ್ರಭೆಯನ್ನು ಕಣಬಹುದಾಗಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುರುಷೋತ್ತಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಉಪಸ್ಥಿತರಿದ್ದರು.
Read These Next
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ
ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ...
ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್ಗೆ
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...