ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ/ಶೋಭ ಯಾತ್ರೆ ನಡೆಸುತ್ತಿರುವದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ವೈನಶಾಪ್ ಮತ್ತು ಬಾರ್, ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶಿಸಿದ್ದಾರೆ.
ಮಾರ್ಚ ೨೮ ರಂದು ಬೆಳಗ್ಗೆ ೬ ಗಂಟೆಯಿಂದ ಮದ್ಯರಾತ್ರಿಯವರೆಗೆ ಯಲ್ಲಾಪುರ ಪಟ್ಟಣ, ಶಿರಸಿ ನಗರ ಹಾಗೂ ಶಿರಸಿ ಎನ್.ಎಮ್.ಪೋಲೀಸ್ ಠಾಣಾ ವ್ಯಾಪ್ತಿ, ಮತ್ತು ಕುಮಟಾ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ. ಸಿದ್ದಾಪುರ, ಹಳಿಯಾಳ, ಜೋಯಿಡಾ, ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರ, ಅಂಕೋಲಾ ತಾಲೂಕುಗಳಲ್ಲಿ, ಹಾಗೂ ಮಾರ್ಚ ೨೯ ರಂದು ಬೆಳಗ್ಗೆ ೬ ಗಂಟೆಯಿಂದ ಮದ್ಯರಾತ್ರಿಯವರೆಗೆ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ, ಯಲ್ಲಾಪುರ ಪಟ್ಟಣ, ಸಿದ್ದಾಪುರ ತಾಲೂಕು ವ್ಯಾಪ್ತಿ ಮತ್ತು ಬನವಾಸಿ ಶಹರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.