ಕಾರವಾರ: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕುವೆಂಪು ಭಾಷಾಭಾರತಿ ಪ್ರಾಧಿಕಾರ ಬೆಂಗಳೂರು ಮತ್ತು ಬಿ.ಜಿ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸದಾಶಿವಗಡ,ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ಓದು-ಕಮ್ಮಟವನ್ನು ಮಾರ್ಚ 17ರಂದು ಬೆಳಗ್ಗೆ 9.30ಕ್ಕೆ ಕಾರವಾರ ಬಿ.ಜಿ.ವಿ.ಎಸ್ ಮಹಾವಿದ್ಯಾಲಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಬಾಡ, ಪ್ರಾಚಾರ್ಯ ಡಾ. ಶಿವಾನಂದ ನಾಯಕ ಕಾರ್ಯಕ್ರಮ ಉದ್ಘಾಟಿಸುವರು. ಕುವೆಂಪು ಭಾಷಾಭಾರತಿ ಪ್ರಾಧಿಕಾರ ಸದಸ್ಯ ಡಾ. ಎಂ.ಜಿ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಾಜಿ ಸಚಿವ, ಬಿ.ಜಿ.ವಿ.ಎಸ್ ಅಧ್ಯಕ್ಷ ಅಧ್ಯಕ್ಷತೆ ವಹಿಸುವರು. ಕುವೆಂಪು ಕವಿತೆಗಳ ವಿಶ್ಲೇಷಣೆಯನ್ನು ಕವಯಿತ್ರಿ ಮತ್ತು ಅಂಕಣಕಾರರಾದ ಶ್ರೀದೇವಿ ಕೆರೆಮನೆ ನೇರವೆರಿಸುವರು.
ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿಯು 2017-18ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಲ್ಪಕಲಾಅಧ್ಯಯನ ಫೆಲೋಶಿಫ್ಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 7 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ರಿಜಿಸ್ಟ್ರಾರ್ ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಕನ್ನಡ ಭವನ, 1ನೇ ಮಹಡಿ ಜೆ.ಸಿ ರಸ್ತೆ ಬೆಂಗಳೂರು-02 ಇಲ್ಲಿಗೆ ನೇರವಾಗಿ ಸಲ್ಲಿಸಬೇಕು ಎಂದು ಶಿಲ್ಪ ಕಲಾ ಅಕಾಡೆಮಿ ರಿಜಿಸ್ಟ್ರಾರ್ ಇಂದ್ರಮ್ಮ ಹೆಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.