ಕಾರವಾರ: ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜೂನ್ 29 ರಿಂದ ಜುಲೈ 1 ರವರೆಗೆ ಅಖಿಲ ಕರ್ನಾಟಕ 11ನೇ ಕನ್ನಡ ವಿಜ್ಞಾನ ಸಮ್ಮೇಳನ ಆಯೋಜಿಸಲಾಗಿದೆ.
ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ವಿಜ್ಞಾನ ಸಾಹಿತ್ಯ ಸೇರಿದಂತೆ ಹಲವು ವಿಷಯಗಳ ಮೇಲೆ ಗೋಷ್ಠಿಗಳು ನಡೆಯಲಿವೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಪ್ರತಿನಿದಿಗಳು ಭಾಗವಹಿಸಲು ಅವಕಾಶವಿರುತ್ತದೆ.
ಭಾಗವಹಿಸಲು ಇಚ್ಚಿಸುವರು ನೋಂದಣಿ ಫಾರಂ ಗಳಿಗಾಗಿ ವಿಜ್ಞಾನ ಪರಿಷತ್ತಿನ ಸ್ಥಳಿಯ ಕಾರ್ಯಕಾರಿ ಸಮಿತಿ ಸದಸ್ಯರು, ಆಯಾ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಅಥವಾ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೇಂದ್ರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 080-26718939, ಮೊ, ಸಂಖ್ಯೆ 9008442557 ಸಂಪರ್ಕಿಸಬಹುದಾಗಿರುತ್ತದೆ.