ಯಲ್ಲಾಪುರ ಸಾರಿಗೆ ಘಟಕದಿಂದ ನೂತನ ಸಾರಿಗೆ ಸೇವೆ ಪ್ರಾರಂಭ

Source: sonews | By Staff Correspondent | Published on 19th February 2018, 11:40 PM | Coastal News | Don't Miss |

ಕಾರವಾರ: ಯಲ್ಲಾಪುರ ಸಾರಿಗೆ ಘಟಕದಿಂದ ಯಲ್ಲಾಪುರ-ಮಂಗಳೂರು- ದೇರಳಕಟ್ಟೆ ಗೆ ನೂತನ ನಾನ್ ಎಸಿ ಸ್ಲೀಪರ್ ಸಾರಿಗೆ ಪ್ರಾರಂಭಿಸಲಾಗಿದೆ. 

ಈ ಸಾರಿಗೆಯು ಯಲ್ಲಾಪುರದಿಂದ ಶಿರಸಿ, ಹೊನ್ನಾವರ, ಭಟ್ಕಳ, ಕುಂದಾಪುರ, ಉಡುಪಿ ಮತ್ತು ಮಂಗಳೂರು ಮಾರ್ಗವಾಗಿ ದೇರಳಕಟ್ಟೆಗೆ ಸಂಚರಿಸುತ್ತದೆ.. ಪ್ರತಿ ದಿನ ರಾತ್ರಿ 8 ಗಂಟೆಗೆ ಯಲ್ಲಾಪುರದಿಂದ ಹೊರಟು ಬೆಳಗ್ಗೆ 4.45 ಕ್ಕೆ ದೇರಳಕಟ್ಟೆ ತಲುಪುವುದು ಹಾಗೂ ದೇರಳಕಟ್ಟೆಯಿಂದ ರಾತ್ರಿ 9.15 ಕ್ಕೆ ನಿರ್ಗಮಿಸಿ ಬೆಳಗ್ಗೆ 6.15 ಕ್ಕೆ ಯಲ್ಲಾಪುರ ತಲುಪಲಿದೆ ಎಂದು ವಾ.ಕ.ರ.ಸಾ ಸಂಸ್ಥೆಯ ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅರ್ಜಿ ಆಹ್ವಾನ 
ಕಾರವಾರ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಮಾರ್ಚ 18 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಬಯಸುವರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ರಾಜ್ಯದಲ್ಲಿ ಕಳೆದ 15 ವರ್ಷಗಳಿಂದ ವಾಸವಾಗಿರಬೇಕು. 18 ರಿಂದ 60 ವರ್ಷ ವಯೋಮಾನದೊಳಗಿರಬೇಕು. 

ಅರ್ಜಿ ನಮೂನೆಯನ್ನು ಜಿಲ್ಲಾ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಕಛೇರಿಯಿಂದ ಪಡೆದು ಜಾತಿ ಪ್ರಮಾಣ ಪತ್ರ, ಬ್ಯಾಂಕ ಪಾಸ್ ಬುಕ್, ರೇಶನ್ ಕಾರ್ಡ ಆಧಾರ ಕಾರ್ಡ, ಆಧಾಯ ಪತ್ರ, ಫೋಟೊ, ಇತ್ಯಾದಿ ದಾಖಲಾತಿಗಳ ಪ್ರತಿಗಳನ್ನು ಲಗತ್ತಿಸಿ,  ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಸಫಾಯಿ ಕರ್ಮಚಾರಿಗಳ ಅಭಿವೃಧ್ಧಿ ನಿಗಮ ನಿಯಮಿತ ಹಳೆ ಜಿಲ್ಲಾ ಪಂಚಾಯತ್ ಕಟ್ಟಡ, ತಹಶಿಲ್ದಾರ ಕಚೇರಿ ಹಿಂಬಾಗ ಕಾರವಾರ ಇಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಟ್ಟದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ತಾಲೂಕು ಮಟ್ಟದಲ್ಲಿ ನಿಗಮದ ತಾಲೂಕು ಮಟ್ಟದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ದೂರವಾಣಿ ಸಂಖ್ಯೆ, 083382-226903 ಸಂಪರ್ಕಿಸಬಹುದು.   

ಅಹವಾಲು ಸ್ವೀಕಾರ ದಿನಾಂಕ ಬದಲು
ಕಾರವಾರ: ಕರ್ನಾಟಕ ಲೋಕಾಯುಕ್ತ, ಕಾರವಾರ ಘಟಕದ ಪೊಲೀಸ್ ಅಧಿಕಾರಿಗಳು ಫೆ. 21 ರಂದು ಕುಮಟಾದಲ್ಲಿ ಸಾರ್ವಜನಿಕರಿಂದ ಅಹವಾಲು ದಿನಾಂಕವನ್ನು ರದ್ದುಗೊಳಿಸಿ, ಫೆ. 23 ರಂದು ಬೆಳಗ್ಗೆ  11 ರಿಂದ 12-30 ಗಂಟೆಯವರೆಗೆ ಕುಮಟಾ ಪ್ರವಾಸಿ ಮಂದಿರಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಕಾರವಾರ ಲೋಕಾಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...