ಭಟ್ಕಳ:ತಾಲ್ಲೂಕಿನ ಕಿತ್ರೆ ಮಾರುಕೇರಿ ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಿ ದೇವಸ್ಥಾನದ ವರ್ಧಂತಿ ಮಹೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮವೂ ಗೋಕರ್ಣದ ಶಿಶಿಕಂಠ ಭಟ್ಟ ಅವರ ಮುಂದಾಳತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಲಂಬೋಧರ ಭಟ್ಟ ನೇತೃತ್ವದಲ್ಲಿ ಗುರುವಾರದಂದು ಸಹಸ್ರಾರು ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಶಕ್ತಿಸ್ಥಳದಲ್ಲಿ ಒಂದಾದ ಶ್ರೀ ಕ್ಷೇತ್ರ ದೇವಿ ಮನೆ ಕಿತ್ರೆಯಲ್ಲಿ ಬುಧವಾರದಿಂದ ವರ್ಧಂತಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತ್ತು. ಗುರುವಾರದ ಎರಡನೇ ದಿನದಂದು ಬೆಳಿಗ್ಗೆಯಿಂದಲೇ ದೇವಾಲಯದ ದೇವಸ್ಥಾನದ ಪ್ರಧಾನ ಅರ್ಚಕ ಲಂಬೋಧರ ಭಟ್ಟ ಬಾಲಚಂದ್ರ ಭಟ್ಟ ನೇತೃತ್ವದಲ್ಲಿ ಗಣೇಶ ಪೂಜೆ, ಪುಣ್ಯಾಹ ಶ್ರೀದೇವರಿಗೆ ಕಲಾವೃದ್ದೀಯಾದಿಹವನ, ವೀರಭದ್ರದೇವರ ಪ್ರೀತ್ಯರ್ಥ ರುದ್ರಹವನ, ಶ್ರೀದೇವರಿಗೆ ಕಲಾಭೀಶೇಕ, ಬಲಿ ರಥಸಂಪ್ರೋಕ್ಷಣೆ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಗೆ ದೇವಾಲಯದ ಪ್ರಾಂಗಣದಲ್ಲಿ ನೆರೆದ ಸಹಸ್ರಾರು ಭಕ್ತ ಸಮೂಹದೊಂದಿಗೆ ಶ್ರೀ ದೇವರ ರಥಾರೋಹಣ ಮತ್ತೂ ಮಹಾರಥೋತ್ಸವವು ಜರುಗಿತು. ಅಲಂಕೃತಗೊಂಡ ಸುಂದರ ಚಿಕ್ಕ ರಥದಲ್ಲಿ ದೇವಿಯ ಬೆಳ್ಳಿ ಮೂರ್ತಿಯನ್ನು ಇರಿಸಿ ಭಕ್ತರೆಲ್ಲರು ಸೇರಿ ದೇವಿಯ ಜಯಘೋಷದೊಂದಿಗೆ ರಥವನ್ನು ಭಕ್ತಿಯಿಂದ ಎಳೆಯಲಾಯಿತು.
ನಂತರ ದೇವಿಯ ತೀರ್ಥ ಪ್ರಸಾದ ವಿತರಣೆ ಹಾಗೂ ಬಂದಂತಹ ಎಲ್ಲಾ ಭಕ್ತರಿಗೂ ಅನ್ನ ಸಂತರ್ಪಣೆ ಸೇವೆ ನಡೆಯಿತು.
ಈ ಸಂಧರ್ಭದಲ್ಲಿ ದೇವಸ್ಥಾನ ಆಡಳಿತ ಕಮಿಟಿ ಅಧ್ಯಕ್ಷ ಶಿವಾನಂದ ಮುಲ್ಲೆಮಕ್ಕಿ, ಪ್ರಮುಖರಾದ ಗಣೇಶ ಹೆಬ್ಬಾರ, ಎಮ್. ಎಮ್.ಹೆಬ್ಬಾರ, ಗಣೇಶ ಹೆಬ್ಬಾರ, ಶಿವಾನಂದ ಹೆಬ್ಬಾರ, ದೇವಸ್ಥಾನ ಮೋಕ್ತೇಸರ ಉಮೇಶ ಹೆಗಡೆ, ದೇವಸ್ಥಾನ ಆಡಳಿತ ಕಮಿಟಿ ಸದಸ್ಯರು, ಭವತಾರಿಣಿ ವಲಯ ಅಧ್ಯಕ್ಷರು, ವಲಯ ಪ್ರಮುಖರು, ಪಂಚಾಯತ ಜನಪ್ರತಿನಿಧಿಗಳು, ತಾಲೂಕಿನ ಪ್ರಮುಖ ರಾಜಕೀಯ ಮುಖಂಡರು ಮುಂತಾದ ಗಣ್ಯರು ದೇವಿಯ ದರ್ಶನ ಪಡೆದರು.
ಸಂಜೆ ದೇವಾಯದಲ್ಲಿ ಶ್ರೀ ಸೂಕ್ತ ಪುರುಷಸೂಕ್ತ ಮಹಾಯಾಗ ಸಂಬಂಧಿ ಕುಂಡಸಂಸ್ಕಾರ, ಅಗ್ನಿ ಜನನ, ಅಗ್ನಿ ಸಂಸ್ಕಾರ, ಕಲಶಸ್ಥಾಪನೆ, ರಾಜೋಪಚಾರಪೂಜೆ, ಬಲಿ, ಮಹಾ ಪೂಜೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಂತರ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಸಂಜೆ 6.30ಕ್ಕೆ ಸ್ಥಳಿಯ ಕಲಾವಿದರಿಂದ ನಾದ ಸಮರ್ಪಣಾ ಕಾರ್ಯಕ್ರಮ, ಬಳಿಕ ರಾತ್ರಿ 8 ಗಂಟೆಗೆ ಲಹರಿ ಕಲಾರಂಘ ಮೂಡಗಿಳಿಯಾರು ಮಹಿಳಾ ಯಕ್ಷಗಾನ ಮಂಡಳಿಯಿಂದ ನಡೆದ ಮೀನಾಕ್ಷಿ ಕಲ್ಯಾಣ ಯಕ್ಷಗಾನ ಪ್ರದರ್ಶನ ಯಕ್ಷಗಾಭಿಮಾನಿಗಳನ್ನು ಮನಸೊರೆಗೊಳಿಸಿತು
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!