ಜಿಲ್ಲೆಗೆ ಕೀರ್ತಿ ತರುವಂತೆ ಶಾಲಾ ಸಿಬ್ಬಂದಿಯ ಹಾರೈಕೆ
ಕೋಲಾರ:- ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಥ್ಲೇಟಿಕ್ಸ್ನಲ್ಲಿ ಪಾಲ್ಗೊಳ್ಳಲು ತೆರಳಿದ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಶುಭಕೋರಿ ಬೀಳ್ಕೊಟ್ಟರು.
ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸಾಧನೆ ತೋರಿದ 58 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಶನಿವಾರ ಸಂಜೆ ಬೆಳಗಾವಿಗೆ ಪ್ರಯಾಣ ಬೆಳೆಸಿದರು.
ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಪ್ರೌಢಶಾಲಾ ಮಕ್ಕಳು ಉತ್ತಮ ಪ್ರದರ್ಶನದೊಂದಿಗೆ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಇಲಾಖೆಯ ಉಪನಿರ್ದೇಶಕ ಸ್ವಾಮಿ ಮತ್ತು ಸಿಬ್ಬಂದಿ ಹಾರೈಸಿ ಶುಭ ಕೋರಿದರು.
ದೈಹಿಕ ಶಿಕ್ಷಣ ಅಧೀಕ್ಷಕ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ವಿನೋದ್ ಬಾಬು, ಬೆಳವಟಿಗೆ ಹೊರಟಿದ್ದು, ದೈಹಿಕ ಶಿಕ್ಷಕರ ಸಂಘದ ಮುರಳಿಮೋಹನ್, ವೆಂಕಟೇಶ್ ಮತ್ತಿತರರು ಹಾಜರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.