ಕೋಲಾರ: ಬಾಗಲಕೋಟೆಯಲ್ಲಿ ಹೈನುಗಾರಿಕೆ ತರಬೇತಿ ಶಿಬಿರ

Source: shabbir | By Arshad Koppa | Published on 7th July 2017, 2:53 PM | State News | Tour |

ಕೋಲಾರ, ಜುಲೈ 05 :    ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಮೂರು ದಿನಗಳ ಹೈನುಗಾರಿಕೆ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ ಜುಲೈ ಮತ್ತು ಆಗಸ್ಟ್‍ನಲ್ಲಿ ನಡೆಯಲಿದೆ. 
    ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ಸೇರಿದಂತೆ ಮುಂತಾದವರು ತಮ್ಮ ಹೆಸರು, ವಿಳಾಸ, ದೂರವಾಣ  ಸಂಖ್ಯೆ ಇತ್ಯಾದಿ ವಿವಗಳನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ. 
    ನೋಂದಾಯಿಸಿಕೊಳ್ಳಲು ಜು.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ ಇವರನ್ನು 9482630790 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಕೋಲಾರ:ವಿವಿಧ ಸಂಘಟನೆಗಳ ವತಿಯಿಂದ ಜಾನಪದ ಬೆಳದಿಂಗಳು ಪ್ರಯುಕ್ತ ತತ್ವಪದ ಮತ್ತು ಜಾನಪದ ಗಾಯನ ಕಾರ್ಯಕ್ರಮ

 ಪ್ರತಿ ಹಳ್ಳಿಗಳಲ್ಲಿರುವ ಕಲಾವಿದರುಗಳನ್ನು ಇಲಾಖೆ ಮತ್ತು ಸರ್ಕಾರ ಗುರ್ತಿಸಿ ಪ್ರೋತ್ಸಾಹಿಸಬೇಕಾಗಿದೆ - ಜಿ. ಮುನಿಕೃಷ್ಣ