ಕೋಲಾರ:  ಬಂಗಾರಪೇಟೆ ಪಟ್ಟಣದ ಹೃದಯ ಭಾಗದಲ್ಲಿನ ದೊಡ್ಡಕೆರೆಯ ಒತ್ತುವರಿ ತೆರವುಗೊಳಿಸಲು ಮನವಿ

Source: shabbir ahmed | By Arshad Koppa | Published on 23rd January 2017, 1:52 AM | State News |

ಕೋಲಾರ,ಜ.20: ಬಂಗಾರಪೇಟೆ ಪಟ್ಟಣದ ಹೃದಯ ಭಾಗದಲ್ಲಿನ ದೊಡ್ಡಕೆರೆಯ ಒತ್ತುವರಿಯನ್ನು ಕೂಡಲೇ ತೆರವುಗೊಳಿಸಬೇಕೆಂದು ಆತ್ಮ ವಿಶ್ವಾಸ ವೇದಿಕೆ ವತಿಯಿಂದ ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿಯವರಿಗೆ ಮನವಿ ಸಲ್ಲಿಸಿದರು.     ಮನವಿ ಸಲ್ಲಿಸಿ ಮಾತನಾಡಿದ ಆತ್ಮ ವಿಶ್ವಾಸ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೀಸಂದ್ರ ಎಂ.ಎನ್.ಭಾರದ್ವಾಜ್ ಸರ್ಕಾರ ಕೋಟ್ಯಾಂತರ ರೂಗಳನ್ನು ಕೆರೆಗಳ ಅಭಿವೃದ್ಧಿಗೆ ಖುರ್ಚು ಮಾಡುತ್ತಿದ್ದರೂ ಸಹ ಇಂದಿಗೂ ಸುಮಾರು ಕೆರೆಗಳು ಹೂಳು ತೆಗೆಯದೆ ಹಾಗೆಯೇ ಉಳಿದಿವೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದರೂ ಸಹ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿಯಾಗಿದೆ ಎಂದು ಆರೋಪಿಸಿದರು.
    ಜನರಿಗೆ ರೈತರಿಗೆ, ಪ್ರಾಣಿಪಕ್ಷಿಗಳಿಗೆ ನೀರಿನ ಮೂಲ ಆಸರೆಯಾಗಿರುವ ಕೆರಯೂ ಅಸ್ತಿಪಂಜರವಾಗಿದೆ. ಕರೆ ಒತ್ತುವರಿಯಿಂದ ಮುಂದಿನ ದಿನಗಳಲ್ಲಿ ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುವ ಸಂಭವವಿದೆ. ಅಷ್ಟೆ ಅಲ್ಲದೆ ರಾಜಕಾಲುವೆಗಳನ್ನು ಸಹ ಒತ್ತುವರಿ ಮಾಡಿಕೊಂಡಿರುವ ಕಾರಣ ಮಳೆ ನೀರು ಕೆರಗಳಿಗೆ ಸೇರುವ ಬದಲು ಮನೆಗಳಿಗೆ ನುಗ್ಗುವಂತಹ ಕಠಿಣ ಪರಿಸ್ಥಿತಿಯನ್ನು ಮುಂದಿನ ದಿನಗಳಲ್ಲಿ ಪಟ್ಟಣ ಎದುರಿಸುವ ಪರಿಸ್ಥಿತಿ ಬರಬಹುದು.
    ಆದ್ದರಿಂದ ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು ಸರ್ವೇ ನಡೆಸಿ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಯಲ್ಲಿನ ಹೂಳು ತೆಗೆಸಿ ಕೆರೆ ಸುತ್ತಲೂ ಪೆಂಸಿಂಗ್ ನಿರ್ಮಿಸಬೇಕೆಂದು ಒತ್ತಾಯಿಸಿದರು.
    ರಾಜ್ಯ ಸಲಹೆಗಾರ ಎಸ್.ಅಯ್ಯಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಯೂಬ್‍ಖಾನ್, ಮಾಹಿತಿ ಮಂಜು, ಅನಿಲ್‍ಕುಮಾರ್, ಕೃಷ್ಣಪ್ಪ ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...