ಕೋಲಾರ,ಡಿ.5: ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾ ವತಿಯಿಂದ ತಾಲೂಕಿನ ಕ್ಯಾಲನೂರಿನಲ್ಲಿ ಒಂದು ದಿನದ ಕನ್ವೆನ್ಷನ್ ವಿದ್ಯಾರ್ಥಿಗಳಿಗಿರುವ ಸಮಸ್ಯೆಗಳ ಬಗ್ಗೆ ಚರ್ಚೆನಡೆಸಲಾಯಿತು.
ಎಸ್.ಡಿ.ಪಿ.ಐನ ಜಿಲ್ಲಾ ಸಮಿತಿ ಸದಸ್ಯ ಸಲೀಂಪಾಷ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಾ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆ, ಅಂಕಪಟ್ಟಿ ವಿಳಂಭ, ವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳು ಮತ್ತು ಸಮಸ್ಯೆಗಳ ಪರಿಹಾರಕ್ಕೆ ಮುಂದಿನ ದಿನಗಳಲ್ಲಿ ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾ ವತಿಯಿಂದ ಯಾವ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಬೇಕು ಎಂಬುವುದರ ಬಗ್ಗೆ ಚರ್ಚಿಸಿಲಾಯಿತು.
ಈ ಸಂದರ್ಭದಲ್ಲಿ ನವಾಜ್, ರೇಷ್ಮಭಾನು, ಅಪ್ರೋಜ್ಪಾಷ, ಫಜಲ್ಖಾನ್, ಮುಷೀರ್ಪಾಷ, ಶೇಖ್ ಇಲಿಯಾಜ್, ಮೊಹಮದ್ಚಾನ್ಖಾನ್ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಹವಹಿಸಿದ್ದರು.