ಕೋಲಾರ: ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಮಾಡಿಸಿ: ನಂಜುಂಡಪ್ಪ

Source: shabbir | By Arshad Koppa | Published on 27th July 2017, 7:32 AM | State News | Guest Editorial |

ಕೋಲಾರ, ಜುಲೈ 26:ರೈತರು ಬೆಳೆಯುವ ಬೆಳೆಗಳು ಮಳೆಯ ಕೊರತೆ, ಕೀಟಗಳ ಹಾವಳಿ, ಬೆಳೆ ರೋಗಗಳು ಮುಂತಾದ ಕಾರಣಗಳಿಂದಾಗಿ ನಷ್ಟ ಅನುಭವಿಸಬೇಕಾಗುತ್ತಿದೆ. ಆದ್ದರಿಂದ ಎಲ್ಲಾ ರೈತರು ಬೆಳೆ ವಿಮೆ ಮಾಡಿಸುವ ಮೂಲಕ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯರಾದ ನಂಜುಂಡಪ್ಪನವರು ತಿಳಿಸಿದರು.
ಸುಗಟೂರು ಬಸ್ ನಿಲ್ದಾಣದ ಅವರಣದಲ್ಲಿ ಇಂದು ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕೃಷಿಗೆ ಸಂಬಂಧಿಸಿದ ಇಲಾಖೆಗಳಾದ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಹೈನುಗಾರಿಕೆ ಮತ್ತು ಅರಣ್ಯ ಇಲಾಖೆಗಳು ಒಟ್ಟಿಗೆ ಸೇರಿ ರೈತರಿಗೆ ಸಮಗ್ರ ಮಾಹಿತಿಯನ್ನು ನೀಡುತ್ತಿವೆ. ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದರು.
ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಬೆಳೆಗಳನ್ನು ಕಡಿಮೆ ವೆಚ್ಚದಲ್ಲಿ ಬೆಳೆದು ಅಧಿಕ ಇಳುವರಿಯನ್ನು ಪಡೆದುಕೊಳ್ಳಲು ಈ ಅಭಿಯಾನವು ಉಪಯುಕ್ತವಾಗಿದೆ. ಯಾವ ರೀತಿ ಉಳುಮೆ ಮಾಡಬೇಕು, ಭಿತ್ತನೆಯ ವಿಧಾನಗಳು, ನೀರಾವರಿ ಪದ್ದತಿಗಳು, ಕೀಟನಾಶಗಳ ಸಿಂಪಡಣೆ ಮುಂತಾದ ವಿಧಾನಗಳನ್ನು ಸಮಗ್ರವಾಗಿ ಅಳವಡಿಸಿಕೊಳ್ಳುವ ಮೂಲಕ ಅಧಿಕ ಆದಾಯ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. 


ನಿವೃತ್ತ ತೋಟಗಾರಿಕಾ ನಿರ್ದೇಶಕರಾದ ಹಾಲಲಿಂಗಯ್ಯ ಮಾತನಾಡಿ, ಟೊಮೆಟೋ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ, ಈ ಬೆಳೆಯನ್ನು  ವರ್ಷದ 365 ದಿನವೂ ಬೆಳೆಯಬಹುದಾಗಿದೆ. ಈ ಬೆಳೆಯನ್ನು ಸಂಜೆ 04 ಗಂಟೆಯ ನಂತರ ನಾಟಿ ಮಾಡಬೇಕು. ಬೆಳೆಯನ್ನು ನೆಟ್ಟ 52 ದಿನಗಳಲ್ಲಿ ಫಸಲನ್ನು ಪಡೆಯಬಹುದು. ಕೀಟಗಳ ನಿವಾರಣೆಗೆ ಬೇವಿನ ಹಿಂಡಿಯ ಪುಡಿಯನ್ನು ಬುಡಕ್ಕೆ ಸಿಂಪಡಿಸಬೇಕು. ಒಂದು ಟೊಮೆಟೋ ಗಿಡಕ್ಕೆ 3-4 ಲೀಟರ್ ನೀರು ಅವಶ್ಯಕ ಎಂದು ವಿವರಿಸಿದರು. 
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ತಿರುಮಲಪ್ಪ, ಕೃಷ್ಣಪ್ಪ, ಸುಗಟೂರು ಗ್ರಾಮಪಂಚಾಯಿತಿ ಅಧ್ಯಕ್ಷೆ ನಾರಾಯಣಮ್ಮ ನಾರಾಯಣಪ್ಪ, ಉಪಾಧ್ಯಕ್ಷರಾದ ಮುನಿರಾಜಪ್ಪ, ಸಹಾಯಕ ಕೃಷಿ ನಿರ್ದೇಶಕರಾದ ಎಸ್.ರಂಗಸ್ವಾಮಿ, ಸಹಾಯಕ ಕೃಷಿ ಅಧಿಕಾರಿ ಸುನೀಲ್, ಕೃಷಿ ವಿಜ್ಞಾನಿಗಳಾದ ನೂರುಲ್ಲಾ, ಶಶಿಧರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.   

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...