ಕೋಲಾರ: ಪ್ರತಿ ವಿದ್ಯಾರ್ಥಿಯ ಶಿಕ್ಷಣಕ್ಕೆ 21 ಸಾವಿರ ವೆಚ್ಚ - ಸೂಲೂರು ಆಂಜಿನಪ್ಪ

Source: shabbir | By Arshad Koppa | Published on 13th August 2017, 11:23 AM | State News | Guest Editorial |

ಕೋಲಾರ ಆ.11: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದಲ್ಲಿ 23 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 21 ಸಾವಿರ ವ್ಯಯವಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಎಂ. ಆಂಜಿನಪ್ಪ ತಿಳಿಸಿದರು.


    ತಾಲ್ಲೂಕಿನ ಹರಟಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿಂದು ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. 
    ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕಷ್ಟಸಾಧ್ಯ ಸ್ಥಿತಿಯನ್ನು ಕಂಡ ಸರ್ಕಾರ ವಿದ್ಯಾರ್ಥಿಗಳು ಶಾಲೆಗೆ ನಿಯಮಿತವಾಗಿ ಹಾಜರಾಗುವಂತೆ ಗುಣಮಟ್ಟದ ಶಿಕ್ಷಣ ಪಡೆಯಸಲು, ಶಿಕ್ಷಣದಿಂದ ವಂಚಿತರಾಗದಿರಲು 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸೈಕಲ್ ನೀಡುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದರು.
ವಿದ್ಯಾರ್ಥಿಗಳಿಗೆ ಸರ್ಕಾರ ಈಗಾಗಲೇ ನೀಡಿರುವ ಸಮವಸ್ತ್ರ, ಪಠ್ಯಪುಸ್ತಕದಂತೆ ಸೈಕಲ್‍ನ್ನು ಜೋಪಾನ ಮಾಡಬೇಕು. ಸೈಕಲ್‍ನಲ್ಲಿ ಶಾಲೆಗೆ ಬಂದು ಶಿಕ್ಷಣದ ಗುರಿ ಮುಟ್ಟಬೇಕು ಎಂದರು. 
ಸರ್ಕಾರಿ ಶಾಲೆಗಳು ಇಂದು ಯಾವುದರಲ್ಲೂ ಕಡಿಮೆಯಿಲ್ಲ. ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಶಿಕ್ಷಕರು ಜ್ಞಾನವಂತರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಮಹಾನ್ ವ್ಯಕ್ತಿಗಳು ದೇಶದ ಉನ್ನತ ಸ್ಥಾನಗಳಲ್ಲಿದ್ದಾರೆ. ಸರ್ಕಾರಿ ಶಾಲೆಯಿಂದ ಕಲಿತವರು ವಿಜ್ಞಾನಿಗಳು, ಐ.ಎ.ಎಸ್. ಅಧಿಕಾರಿಗಳು ಆಗಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯೆ ಯಾರ ಸ್ವತ್ತು ಅಲ್ಲ. ಸರ್ಕಾರಿ ಶಾಲೆಯಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆದು ಉನ್ನತ ಜ್ಞಾನವನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ, ಮೊದಲು ಶಿಕ್ಷಣ ಪಡೆಯಬೇಕು. ವಿಧ್ಯೆ ಪಡೆದು ಆದರ್ಶಪ್ರಾಯರಾಗುವಂತೆ ಸರ್ಕಾರಿ ಪ್ರೌಢ ಶಾಲಾ ಮುಖ್ಯೋಪಾದ್ಯಾಯಿನಿ ಶಶಿವಧನ ಅಭಿಪ್ರಾಯಪಟ್ಟರು.
ಶಾಲಾಭಿವೃದ್ಧಿ  ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ. ವೆಂಕಟರಾಮಪ್ಪ ಮಾತನಾಡಿ ವಿದ್ಯಾರ್ಥಿಗಳು ಕಲಿಯುವಾಗ ಕೊರಗದೆ, ಸೊರಗದೆ ಶಾಲೆಯ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಸರ್ಕಾರ ತಮ್ಮ ಮೇಲೆ ಇಟ್ಟಿರುವ ನಂಬಿಕೆ ಅರ್ಹರಾಗುವ ಮೂಲಕ ಉತ್ತಮ ಸಾಧನೆ ಮಾಡುವಂತೆ ಹೇಳಿದರು.
ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಕೃಷ್ಣ ಮುಖಂಡರಾದ ನಾಗಭೂಷಣ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಶಾಲಾ ಮುಖ್ಯೋಪಾದ್ಯಾಯ ಜಿ. ಶ್ರೀನಿವಾಸ್, ಸಮೂಹ ಸಂಪನ್ಮೂಲ ವ್ಯಕ್ತಿ ವಿ. ಮುನೇಗೌಡ, ಸಹ ಶಿಕ್ಷಕರುಗಳಾದ ಕೃಷ್ಣಪ್ಪ, ಗೋವಿಂದಪ್ಪ, ಮೀನಾ, ಮಂಜುಳ, ಮಮತ, ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದು, ಇದಕ್ಕೂ ಮುನ್ನ ಭಾರತ ಸ್ವಾತಂತ್ರ್ಯ ಗಳಿಸಿ 70 ವರ್ಷ ಪೂರೈಸಿದ ಸಂದರ್ಭದಲ್ಲಿ ‘ಸಂಕಲ್ಪದಿಂದ ಸಿದ್ಧಿ’ ಪ್ರಮಾಣ ವಚನದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.


                                    (ಜಿ. ಶ್ರೀನಿವಾಸ್)
                                      ಕೋಲಾರ.


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...