ಕೋಲಾರ: ರಾಷ್ಟ್ರೀಯ ಮೌಲ್ಯಗಳನ್ನು ಕಾಪಾಡಿ : ಬಿಇಒ ರಘುನಾಥರೆಡ್ಡಿ

Source: shabbir | By Arshad Koppa | Published on 16th August 2017, 7:42 AM | State News | Guest Editorial |

ಕೋಲಾರ ಆ. 15: ರಾಷ್ಟ್ರೀಯ ಏಕತೆ, ಸಮಗ್ರತೆ, ಸಹೋದರತ್ವ ಸಾರುವ ದೃಷ್ಠಿಯಲ್ಲಿ ರಾಷ್ಟ್ರೀಯ ಮೌಲ್ಯಗಳನ್ನು ಕಾಪಾಡುವಂತಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲಾ ಭಾರತೀಯರು ಎಂಬ ಮನೋಭಾವ ನಮ್ಮಲ್ಲಿ ಮೂಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಘುನಾಥರೆಡ್ಡಿ ಅಭಿಪ್ರಾಯಪಟ್ಟರು.
    ನಗರದ ಭಾರತ ಸೇವಾದಳ ಜಿಲ್ಲಾ ಕಾರ್ಯಾಲಯದಲ್ಲಿಂದು 71ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.
    ತ್ಯಾಗ ಬಲಿದಾನಗಳಿಂದ ಪಡೆದಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕು. ಹಿರಿಯರ ತ್ಯಾಗ ಬಲಿದಾನ ನೆನಪಿಸಿಕೊಂಡರೆ ಸಾಲದು, ಅವರ ಕನಸುಗಳನ್ನು ನನಸು ಮಾಡುವತ್ತ ಚಿಂತನ ಮಂಥನಗಳಾಗಬೇಕು. ಸರ್ಕಾರಿ ಆದೇಶದಂತೆ ಮುಂದಿನ ದಿನಗಳಲ್ಲಿ ಪ್ರತಿ ಶಾಲೆಯಲ್ಲೂ ಭಾರತ ಸೇವಾದಳದ ಘಟಕವನ್ನು ಸ್ಥಾಪಿಸಲಾಗುವುದೆಂದು ತಿಳಿಸಿದರು.
    ವಿಚಿದ್ರಕಾರಿ ಶಕ್ತಿಗಳ ದಮನಕ್ಕೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಭಾರತೀಯ ಸೈನಿಕನಂತಾಗಬೇಕು. ದೇಶಾಭಿಮಾನ ಬೆಳೆಸಿಕೊಂಡಾಗ ಮಾತ್ರ ದೇಶಪ್ರೇಮ, ದೇಶಭಕ್ತಿ ಮೂಡುತ್ತದೆ ಎಂದರು.
    ಜಿಲ್ಲಾ ಭಾರತ ಸೇವಾದಳ ಅಧ್ಯಕ್ಷ ಕೆ.ಎಸ್. ಗಣೇಶ್ ಅಧ್ಯಕ್ಷತೆ ವಹಿಸಿದ್ದು, ಭಾರತ ಸೇವಾದಳ ಕೇಂದ್ರ ಸಮಿತಿ ಸದಸ್ಯ ಬಿ.ಕೆ. ವೆಂಕಟನಾರಾಯಣ್, ಉಪಾದ್ಯಕ್ಷ ಜಿ. ಶ್ರೀನಿವಾಸ್, ಕಾರ್ಯದರ್ಶಿ ಎಸ್.ಸುಧಾಕರ್, ಖಜಾಂಚಿ ರವಿಕುಮಾರ್, ಜಿಲ್ಲಾ ಸಮಿತಿ ಸದಸ್ಯರಾದ ಡಿ. ಮುನೇಶ್, ರಾಜೇಶ್‍ಸಿಂಗ್, ತಾಲ್ಲೂಕು ಅಧ್ಯಕ್ಷ ವೈ. ಶಿವಕುಮಾರ್, ಕಾರ್ಯದರ್ಶಿ ಶ್ರೀರಾಮ್,  ಉಪಾಧ್ಯಕ್ಷ ಸಂಪತ್‍ಕುಮಾರ್, ಕೋಶಾಧ್ಯಕ್ಷ ಜಿ. ದೀಪು, ಸದಸ್ಯರಾದ ಸಿ. ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಅಧೀಕ್ಷಕ ಮುನಿಸ್ವಾಮಿಗೌಡ, ಭಾರತ ಸೇವಾದಳದ ಜಿಲ್ಲಾ ಸಂಘಟಕ ಎಂ.ಬಿ.ದಾನೇಶ್, ಸಂಪನ್ಮೂಲವ್ಯಕ್ತಿ ವಿ.ಮಂಜುನಾಥ್, ಜಿಲ್ಲಾ ಸಮಿತಿ ಸದಸ್ಯ ಬೈರೇಗೌಡ ಮತ್ತಿತರರು ಉಪಸ್ಥಿತರಿದ್ದರು.
    ವಂದೇ ಮಾತರಂ ರಾಷ್ಟ್ರಗೀತೆ ಧ್ವಜವಂದನೆ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಮಾದ್ಯಮಿಕ, ಉರ್ದು, ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರುಗಳು, ಸಹ ಶಿಕ್ಷಕರು, ವಿದ್ಯಾರ್ಥಿ ಭಾಗವಹಿಸಿದ್ದರು.

                                (ಜಿ.ಶ್ರೀನಿವಾಸ್)
   ಕೋಲಾರ

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...