ಕೋಲಾರ:- ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ವಿ.ಆರ್.ಸುದರ್ಶನ್ ಅವರನ್ನು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಅವರ ಅಭಿಮಾನಿಗಳು ಸನ್ಮಾನಿಸಿ, ಅಭಿನಂದಿಸಿದರು.
ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಸುದರ್ಶನ್ ಅವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿದ್ದು, ಅವರಿಗೆ ಮತ್ತಷ್ಟು ಅವಕಾಶಗಳು ಸಿಗಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ಮಿನರಲ್ಸ್ ಮಾಜಿ ನಿರ್ದೇಶಕ ಆರ್.ಕಿಶೋಕರ್ ಕುಮಾರ್,ಆರ್.ವಿ.ಎಂ ಮಂಡಿ ಚಲಪತಿ, ವಕ್ಕಲೇರಿ ಮಂಜುನಾಥ್, ಕುರುಬರಪೇಟೆ ಮಂಜುನಾಥ್, ಬಂಗಾರಪೇಟೆಯ ರಾಜು, ರವಿ, ಬಾಬು, ಕೋಲಾರದ ಬುಲೆಟ್ ಪ್ರಕಾಶ್, ದೊಡ್ಡಹಸಾಳದ ಕೃಷ್ಣಮೂರ್ತಿ, ಶ್ರೀನಿವಾಸಗೌಡ ಮತ್ತಿತರರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ