ಕೋಲಾರ: ಕುರಬರಪೇಟೆಯ ಶ್ರೀ ಹನುಮಾನ್ ಕನ್ನಡಿಗರ ಸಂಘದ ವತಿಯಿಂದ ಶ್ರೀ ಗಣಪತಿ ವಾರ್ಷಿಕೋತ್ಸವ

Source: shabbir | By Arshad Koppa | Published on 27th August 2017, 9:09 AM | State News | Guest Editorial |

ಕೋಲಾರ: ನಗರದ ಕುರಬರಪೇಟೆಯ ಶ್ರೀ ಹನುಮಾನ್ ಕನ್ನಡಿಗರ ಸಂಘದ ವತಿಯಿಂದ ಶ್ರೀ ಗಣಪತಿಯ 25ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.


  ಪ್ರಸಿದ್ಧ ತಿರುಪತಿಯ ವೆಂಕಟೇಶ್ವರ ಮೂರ್ತಿಯ ಪ್ರತಿರೂಪವಾದ ವಿಶೇಷ ಗಣೇಶನ ಮೂರ್ತಿಯನ್ನು ಶುಕ್ರವಾರ ಸಂಜೆ 7ಗಂಟೆಗೆ ಪ್ರತಿಷ್ಠಾಪಿಸಲಾಯಿತು. ಶ್ರೀ ಗಣಪತಿಯ 25ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷರಾದ ಮಹಾಲಕ್ಷ್ಮಿ ಪ್ರಸಾದ್‍ಬಾಬು ಗಿಡಗಳನ್ನು ವಿತರಿಸುವ ಮೂಲಕ ಉದ್ಘಾಟಿಸಿದರು. ನೂರಾರು ಮಂದಿ ಭಕ್ತಾಧಿಗಳು ವೈಕುಂಠ ಏಳುದ್ವಾರಗಳ ಮೂಲಕ ಪ್ರವೇಶ ಮಾಡಿ ವಿಶೇಷ ಗಣಪತಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸಿ.ಸೋಮಶೇಖರ್, ಮಂಜುನಾಥ್, ನೀರಾವರಿ ಹೋರಾಟ ಸಮಿತಿ ಸಂಚಾಲಕರಾದ  ಕುರುಬರಪೇಟೆ ವೆಂಕಟೇಶ್, ಶ್ರೀನಿವಾಸ್, ಶ್ರೀ ಹನುಮಾನ್ ಕನ್ನಡಿಗರ ಸಂಘದ ಸದಸ್ಯರಾದ ಸಂದೀಪ್, ಸಂತೋಷ್, ದೀಪು, ಬಬುಲು, ಶ್ರೀಕಾಂತ್, ರಾಜೇಶ್, ಬುಜ್ಜಿ, ಮಂಜು ಮುಂತಾದವರು ಹಾಜರಿದ್ದರು. 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...