ಕೋಲಾರ ಜು.22: ಪ್ರಾಥಮಿಕ ಶಾಲಾ ಶಿಕ್ಷಕರು ಕರ್ತವ್ಯವನ್ನು ಮರೆಯಬಾರದು. ಕಛೇರಿಗಳ ಬಳಿ ಸುಳಿದಾಡಬಾರದು. ತಮ್ಮ ಶಾಲಾ ಕರ್ತವ್ಯ ಮುಗಿಸಿದ ನಂತರ ಸಂಜೆಗೆ ಸಮಸ್ಯೆಗಳಿದ್ದಲ್ಲಿ ನನ್ನನ್ನು ಕಛೇರಿಯಲ್ಲಿ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಜಿಲ್ಲಾ ಉಪನಿರ್ದೇಶಕ ಸ್ವಾಮಿ ತಿಳಿಸಿದರು.
ತಮ್ಮ ಕಾರ್ಯಾಲಯದಲ್ಲಿಂದು ಜಿಲ್ಲಾ ಪ್ರಾಥಮಿಕ ಶಾಲಾ ಬಡ್ತಿ ಮುಖ್ಯೋಪಾದ್ಯಾಯರ ಸಂಘ ನೀಡಿದ ಸ್ವಾಗತ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಸಂಘದ ಜಿಲ್ಲಾಧ್ಯಕ್ಷ ಆರ್. ಶ್ರೀನಿವಾಸನ್ ಮಾತನಾಡಿ ಜಿಲ್ಲೆಯಾದ್ಯಂತ ಇರುವ ಮುಖ್ಯೋಪಾದ್ಯಾಯರ ಸಮಸ್ಯೆಗಳು ಮತ್ತು ಶೈಕ್ಷಣಿಕ ಮಾರ್ಗದಶನಕ್ಕಾಗಿ ತಿಂಗಳಿಗೊಮ್ಮೆ ಸಭೆ ನಡೆಸಬೇಕೆಂದು ಮತ್ತು ಜಿಲ್ಲೆಯ ಶೈಕ್ಷಣ ಕ ಅಭಿವೃದ್ಧಿಯ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಶೈಕ್ಷಣ ಕ ಕಾರ್ಯಾಗಾರವನ್ನು ಇಲಾಖಾ ವತಿಯಿಂದ ಹಮ್ಮಿಕೊಂಡು ಮುಖ್ಯ ಶಿಕ್ಷಕರನ್ನು ಶಾಲಾ ನಾಯಕತ್ವದೆಡೆಗೆ ಸದೃಢರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ. ಶ್ರೀನಿವಾಸ್, ಕಾರ್ಯದರ್ಶಿ ಬಿ. ಶ್ರೀನಿವಾಸ್, ಖಜಾಂಚಿ ಬಹದ್ದೂರ್ ಸಾಬ್, ಮಹಿಳಾ ಸಂಘಟನಾ ಕಾರ್ಯದರ್ಶಿ ಚಾಮುಂಡೇಶ್ವರಿ ದೇವಿ, ಪ್ರಭಾವತಿ, ಹೆಚ್.ಸಿ. ಬೈರೇಗೌಡ, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಜನಾರ್ಧನ್, ಕಾರ್ಯದರ್ಶಿ ಸೊಣ್ಣಪ್ಪ, ಉಪಾಧ್ಯಕ್ಷ ವೆಂಕಟರವಣಪ್ಪ, ಶಂಕರಪ್ಪ ಕೆ.ಜಿ.ಎಫ್. ಘಟಕದ ಅಧ್ಯಕ್ಷ ಕೃಷ್ಣಪ್ಪ, ಕಾರ್ಯದರ್ಶಿ ಗೋಪಾಲ್, ಮುಂತಾದವರು ಉಪಸ್ಥಿತರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.