ಕೋಲಾರ:ಕೋಲಾರ ರೋಟರಿ ಕ್ಲಬ್ ವತಿಯಿಂದ ವಿವಿಧ ಸ್ಥಳಗಳಲ್ಲಿ ದ್ವಜಾರೋಹಣ

Source: shabbir | By Arshad Koppa | Published on 16th August 2017, 8:16 AM | State News | Guest Editorial |

ಕೋಲಾರ: 71ನೇ ಸ್ವತಂತ್ರ್ಯ ದಿನಾಚರಣೆ ಪ್ರಯುಕ್ತ ಕೋಲಾರ ರೋಟರಿ ಕ್ಲಬ್ ವತಿಯಿಂದ ವಿವಿಧ ಸ್ಥಳಗಳಲ್ಲಿ ದ್ವಜಾರೋಹಣ ಹಾಗೂ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ನಿಘಂಟು ವಿತರಣೆ, ವೃದ್ಧರಿಗೆ ಹಣ್ಣು ಹಂಪಲು ವಿತರಣೆ ಮುಂತಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
      ಮೊದಲಿಗೆ ಬೆಳಗ್ಗೆ 6:30ಕ್ಕೆ ರೋಟರಿ ಭವನದಲ್ಲಿ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಕಛೇರಿ ಆವರಣದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ಬಿ.ಕೆ.ದೇವರಾಜ್‍ರವರು ದ್ವಜಾರೋಹಣ ನೆರವೇರಿಸಿದರು. 
           ನಂತರ 8:00 ಗಂಟೆಗೆ ಕಾರಂಜಿಕಟ್ಟೆಯ ಸುಭಾಷ್ ಶಾಲೆ, 8:30ಕ್ಕೆ ಹೊದಲವಾಡಿ ಪ್ರಾರ್ಥಮಿಕ ಶಾಲೆ, 9:00 ಗಂಟೆಗೆ ಕಾಮದೇನಹಳ್ಳಿ ಪ್ರಾರ್ಥಮಿಕ ಶಾಲೆ, 10:00 ಗಂಟೆಗೆ ನೇತ್ರ ದೀಪ ಆಸ್ಪತ್ರೆಯಲ್ಲಿ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಿಘಂಟು ವಿತಾರಣೆ ಮಾಡಲಾಯಿತು. 10:30ಕ್ಕೆ ಅಂತರಗಂಗೆ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳಿಗೆ ಊಟ ಮತ್ತು ಹಣ್ಣುಗಳನ್ನು ವಿತರಿಸಲಾಯಿತು, 11:00 ಗಂಟೆಗೆ ಹುದುಕುಳ ಪ್ರಾರ್ಥಮಿಕ ಶಾಲೆಯಲ್ಲಿ ದ್ವಜಾರೋಹಣ ಕಾರ್ಯಕ್ರಮ ನೆಡೆಸಿ ಕಳೆದ ವರ್ಷದ ಪ್ರತಿಭಾವಂತ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು, ಮತ್ತೆ 12:30ಕ್ಕೆ ಬೀರಂಡಹಳ್ಳಿ ವೃದಾಶ್ರಮದಲ್ಲಿನ ವಯೋವೃದರಿಗೆ ಹಣ್ಣು ಹಂಪಲು ವಿತರಿಸಲಾಯಿತು.


    ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆ ಖಜಾಂಚಿ ಸಿ.ಆರ್.ಆಶೋಕ್, ಕಾರ್ಯದರ್ಶಿ ಎಸ್. ಎಂ.ಚಂದ್ರಶೇಖರ್,  ಮಾಜಿ ಅದ್ಯಕ್ಷ ಬೈಚಪ್ಪ, ಕೆ.ಗೋಪಾಲರೆಡ್ಡಿ, ರಾಮಚಂದ್ರಪ್ಪ,  ಗೋಪಾಲಕೃಷ್ಣರೆಡ್ಡಿ ಮತ್ತು ಸ್ಕೌಟ್ ಮತ್ತು ಗೈಡ್ಸ್ ಅದ್ಯಕ್ಷ ಪ್ರಹ್ಲದ್‍ರಾವ್, ಬಿಸಪ್ಪಗೌಡ, ಕೆ.ವಿ.ಶಂಕರಪ್ಪ, ಡಾ.ಮೌನಿ, ವಿ.ಪಿ.ಸೋಮಶೇಖರ್ ಸೇರಿದಂತೆ ಶಾಲಾ ಮುಖ್ಯೋಪಾದ್ಯಯರುಗಳು ಮತ್ತು ಶಾಲಾ ಶಿಕ್ಷಕವೃಂದ ಉಪಸ್ಥಿತರಿದ್ದರು.


     (ಬಿ.ಕೆ.ದೇವರಾಜ್) 
ಅಧ್ಯಕ್ಷರು ರೋಟರಿ ಕ್ಲಬ್ ಕೋಲಾರ


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...