ಕೋಲಾರ:ಅಪಘಾತದಲ್ಲಿ ನಿಧನರಾದ ಶ್ರೀಹರಿ ಸ್ಮರಣಾರ್ಥ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Source: shabbir | By Arshad Koppa | Published on 19th August 2017, 7:52 AM | State News | Guest Editorial |

ಕೋಲಾರ:- ಸರ್ಕಾರಿ ಶಾಲೆಗಳ ಮಕ್ಕಳ ಕಲಿಕೆಗೆ ಪೂರಕವಾಗಿ ಉಳ್ಳವರು ನೆರವಿನ ಹಸ್ತ ಚಾಚುವ ಸಾಮಾಜಿಕ ಕಾಳಜಿಯ ಕಾರ್ಯ ಸ್ಮರಣೀಯ ಎಂದು ಹಿರಿಯ ಛಾಯಾಗ್ರಾಹಕ ಹಾಬಿ ರಮೇಶ್ ಅಭಿಪ್ರಾಯಪಟ್ಟರು.
ಶುಕ್ರವಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಗರದ ಸತ್ಯನಾರಾಯಣ ಜ್ಯುವೆಲರ್ಸ್‍ನ ಮಾಲೀಕರಾದ ವೆಂಕಟೇಶ್ ಅವರ ದಿವಂಗತ ಪುತ್ರ ಶ್ರೀಹರಿ ಸ್ಮರಣಾರ್ಥ ಶಾಲಾ ಮಕ್ಕಳಿಗೆ ಬ್ಯಾಗ್‍ಗಳನ್ನು ವೆಂಕಟೇಶ್ ಅವರ ಸಮ್ಮುಖದಲ್ಲಿ ವಿತರಿಸಿ,ಶ್ರದ್ದಾಂಜಲಿ ಅರ್ಪಿಸಿ ಅವರು ಮಾತನಾಡುತ್ತಿದ್ದರು.
ಧಾರ್ಮಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳುತ್ತಿದ್ದ ವೆಂಕಟೇಶ್ ಅವರ ಕುಟುಂಬಕ್ಕೆ ಮಗನ ಸಾವು ತುಂಬಲಾರದ ನಷ್ಟ ತಂದಿದೆ ಎಂದು ವಿಷಾದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್, ದುಃಖದಲ್ಲೂ ಬಡ ಮಕ್ಕಳಿಗೆ ನೆರವಾಗುವ ಹೃದಯವಂತಿಕೆ ಎಲ್ಲರಿಗೂ ಬರಲಾರದು ಎಂದರು.
ತಮ್ಮ ಮಗನ ಸಾವಿನ ದುಃಖದ ನಡುವೆ ಸರ್ಕಾರಿ ಶಾಲೆಯ ಮಕ್ಕಳಿಗೆ ನೆರವಾಗಬೇಕೆಂಬ ಅವರ ಬಯಕೆ ನಿಜಕ್ಕೂ ಸಾರ್ಥಕತೆ ತರುತ್ತದೆ ಎಂದು ತಿಳಿಸಿ ಅಪಘಾತದಲ್ಲಿ ಕೊನೆಯುಸಿರೆಳೆದ ವೆಂಕಟೇಶ್ ಅವರ ಪುತ್ರ ಶ್ರೀಹರಿ ಅವರಿಗೆ ಚಿರಶಾಂತಿ ಸಿಗಲಿ ಎಂದು ಹಾರೈಸಿದರು.
ವಿಹಿಂಪ ಅಧ್ಯಕ್ಷರಾಗಿ ವೆಂಕಟೇಶ್ ಅವರ ತಂದೆ ಸತ್ಯನಾರಾಯನಶೆಟ್ಟಿ ಅವರು ಅನೇಕ ಧಾರ್ಮಿಕ ಕಾರ್ಯಗಳ ಮೂಲಕ ಮನೆಮಾತಾಗಿದ್ದರು, ಅವರಂತೆಯೇ ಅವರ ಮಗ ವೆಂಕಟೇಶ್ ಅವರು ನಿರಂತರವಾಗಿ ಅಂತರಗಂಗೆಯಲ್ಲಿ ಕೊನೆ ಕಾರ್ತಿಕ ಸೋಮವಾರ ನಡೆಸಿಕೊಂಡು ಬಂದಿರುವ ಅನ್ನದಾಸೋಹ ಸ್ಮರಣೀಯ ಎಂದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಫ್ಯಾನ್ಸಿಹಾಲ್‍ನ ಮಾಲೀಕರಾದ ರಾಜೇಂದ್ರ ಕಾರ್ಲೇಕರ್,ಪ್ರಸಾದ್ ಜ್ಯುವೆಲರ್ಸ್‍ನ ಪ್ರಸಾದ್ ಮಾತನಾಡಿ, ವೆಂಕಟೇಶ್ ಅವರಿಗೆ ತಮ್ಮ ಮಗನ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು,ಶಿಕ್ಷಕರು ಎರಡು ನಿಮಿಷ ಮೌನಾಚರಣೆ ಮೂಲಕ ದಿವಂಗತ ಶ್ರೀಹರಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಮುನಿರಾಜು, ಮಾಜಿ ಅಧ್ಯಕ್ಷ ಮುಳ್ಳಹಳ್ಳಿ ಮಂಜುನಾಥ್, ಶಿಕ್ಷಕರಾದ ಸಿ.ಎಂ.ವೆಂಕಟರಮಣಪ್ಪ, ಎಸ್.ಅನಂತಪದ್ಮನಾಭ್,ಸತೀಶ್ ಎಸ್.ನ್ಯಾಮತಿ, ಭವಾನಿ, ಶ್ವೇತಾ, ಸುಗುಣಾ,ಲೀಲಾ, ಡಿ.ಚಂದ್ರಶೇಖರ್, ವಸಂತಮ್ಮ ಮತ್ತಿತರರು ಹಾಜರಿದ್ದು,  ಸಿ.ಎಲ್.ಶ್ರೀನಿವಸಲು ಸ್ವಾಗತಿಸಿ, ನಿರೂಪಿಸಿದರು.ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...