ಕೋಲಾರ: ಶಿಕ್ಷಣ ಕ್ಷೇತ್ರದಲ್ಲಿ ಬೋಧನೆ ಹಾಗೂ ಕಲಿಕಾ ಗುಣಮಟ್ಟದಲ್ಲಿ ಮಹತ್ವದ ಬದಲಾವಣೆಗೆ ಕಾರ್ಯಾಗಾರ ಅಗತ್ಯ

Source: shabbir | By Arshad Koppa | Published on 12th July 2017, 7:42 PM | State News | Guest Editorial |

ಕೋಲಾರ ಜು.12: ಶಿಕ್ಷಣ ಕ್ಷೇತ್ರದಲ್ಲಿ ಬೋಧನೆ ಹಾಗೂ ಕಲಿಕಾ ಗುಣಮಟ್ಟದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಸಂಪನ್ಮೂಲ ವ್ಯಕ್ತಿಗಳಿಗೆ ಅಗತ್ಯವಾಗಿ ಲರ್ನಿಂಗ್ ಲೀಡರ್ ಕಾರ್ಯಾಗಾರ ಬಹಳ ಮುಖ್ಯವೆಂದು ಸ್ಟರ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ರಘುರಾಮಾನುಜಂ ಅಭಿಪ್ರಾಯಪಟ್ಟರು.


    ನಗರದ ಡಯಟ್‍ನಲ್ಲಿ ಕೋಲಾರ ಜಿಲ್ಲೆಯ 6 ತಾಲ್ಲೂಕಿನ ಎಲ್ಲಾ ಬಿ.ಆರ್.ಪಿಗಳಿಗೆ 3 ದಿನಗಳ ಕಾಲ ಡಿ.ಎಸ್.ಎ.ಆರ್.ಟಿ ಹಾಗೂ ಸ್ಟರ್ ಶಿಕ್ಷಣ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಲರ್ನಿಂಗ್ ಲೀಡರ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ಸ್ಟಾರ್ ಸಂಸ್ಥೆಯ ಉದ್ದೇಶಗಳಾದ ಗುಣಮಟ್ಟದ ಕಲಿಕೆ, ಶಿಕ್ಷಕರ ಅಭ್ಯಾಸಗಳನ್ನು ಸುಧಾರಿಸುವುದು, ಇಂಟನಿಕ್ಸ್ ಮೋಟಿವೇಷನ್ ಮತ್ತು ಮೈಂಡ್ ಸೆಟ್‍ಗಳನ್ನು ಬೆಳೆಸುವಲ್ಲಿ ಬಿ.ಆರ್.ಪಿ., ಸಿ.ಆರ್.ಪಿಗಳ ಪಾತ್ರ ಬಹಳ ಮುಖ್ಯವೆಂದು ತಿಳಿಸಿದರು.
    ಸ್ಟರ್ ಸಂಸ್ಥೆಯ ಮತ್ತೊಬ್ಬ ವ್ಯವಸ್ಥಾಪಕಿ ಕೃಷ್ಣಶ್ರೀವಲ್ಲಿಯವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ಶೈಕ್ಷಣ ಕ ರಂಗದಲ್ಲಿ ಸಿ.ಆರ್.ಪಿ. ಬಿ.ಆರ್‍ಪಿಗಳನ್ನು ಉತ್ತಮ ರೀತಿಯಲ್ಲಿ ವ್ಯವಸ್ಥೆ ಗೊಳಿಸಲು ಕಾರ್ಯಾಗಾರಗಳು ಬಹಳ ಮುಖ್ಯವೆಂದು ಹಾಗೂ ಉತ್ತಮ ರೀತಿಯಲ್ಲಿ ಧನಾತ್ಮಕವಾಗಿ ಚಿಂತನೆ ಮಾಡಬೇಕು. ಸಮಸ್ಯೆ ಎದುರಾದಾಗ ತಾಳ್ಮೆಯಿಂದ ನಿಬಾಯಿಸುವ ಜಾಣ್ಮೆ ಸಿ.ಆರ್.ಪಿ. ಬಿ.ಆರ್‍ಪಿಗಳು ವೃತ್ತಿ ಕ್ಷೇತ್ರದಲ್ಲಿ ಅಳವಡಿಸಕೊಳ್ಳಬೇಕು. ಅದಕ್ಕಾಗಿ ರಚನಾತ್ಮಕ ಕೌಶಲ್ಯಭರಿತ ಕಾರ್ಯಾಗಾರವನ್ನು ಆಯೋಜಿಸಬೇಕೆಂದರು.
    
ಕಾರ್ಯಾಗಾರದಲ್ಲಿ ಸ್ಟರ್ ಸಂಸ್ಥೆಯ ಮೌಲ್ಯಮಾಪನ ಮುಖ್ಯಸ್ಥ ಪರಿವಿಂದರ್ ಸಿಂಗ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತಿಮ್ಮಸಂದ್ರ ನಾಗರಾಜ್ ಹಾಗೂ ಜಿಲ್ಲೆಯ ಎಲ್ಲಾ ಬಿ.ಆರ್.ಪಿಗಳು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...