1.25 ಕೋಟಿ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ – ರಾಜೇಂದ್ರ

Source: sonews | By Staff Correspondent | Published on 3rd April 2018, 12:53 AM | State News | Don't Miss |

ಕೋಲಾರ : 30 ಜುಲೈ 2018ರ ಒಳಗೆ ನೂತನ ಕಟ್ಟಡವನ್ನು ನೀಡುವುದಾಗಿ ಬೆಂಗಳೂರಿನ ಸ್ಯಾಮ್‍ಸಂಗ್ ಪೈನಾನ್ಸ್ ಮುಖ್ಯಸ್ಥರಾದ ರಾಜೇಂದ್ರ ರವರು ತಿಳಿಸಿದರು.

ಅವರು ಇಂದು ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಂಬೋಡಿಯಲ್ಲಿ ನೂತನ ಕಟ್ಟಡ ಕಟ್ಟಲು ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಇಲ್ಲಿ ಸುಮಾರು ವರ್ಷಗಳ ಹಳೆಯದಾದ ಕಟ್ಟಡವು ಬಿದ್ದು ಹೋಗಿದ್ದು, ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ತೊಂದರೆಯನ್ನು ಕಂಡ ಸ್ಯಾಮ್‍ಸಂಗ್ ಗ್ರೂಪ್ಸ್ ಕಂಪನಿ ಮತ್ತು ಗೆಳೆಯರ ಬಳಗದ ಪದಾಧಿಕಾರಿಗಳು ಒಟ್ಟಾಗಿ ಚರ್ಚೆ ಮಾಡಿ ಸುಮಾರು 1.25 ಕೋಟಿ ವೆಚ್ಚದಲ್ಲಿ ಏಳು ಕೊಠಡಿಗಳನ್ನು ಆಧುನಿಕ ರೀತಿಯಲ್ಲಿ ಕಟ್ಟಿಕೊಡಲು ಒಪ್ಪಿಕೊಂಡಿರುತ್ತಾರೆ. ಈ ಸಂಬಂಧ ಈ ಹಿಂದೆಯೇ ಇಲಾಖಾ ಅಧಿಕಾರಿಗಳೊಂದಿಗೆ ಹಾಗೂ ಊರಿನ ಎಸ್.ಡಿ.ಎಂ.ಸಿ. ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿರುತ್ತಾರೆ. ಇಂದು ಸ್ಯಾಮ್‍ಸಂಗ್ ಪೈನಾನ್ಸ್ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳೊಂದಿಗೆ  ಭೂಮಿ ಪೂಜೆಯನ್ನು ನೆರವೇರಿಸುತ್ತಾ ಅವರ ಗ್ರೂಪ್‍ನವರೇ ಕಟ್ಟಡ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿರುವುದಾಗಿ ತಿಳಿಸಿದರಲ್ಲದೆ ಗುಣಮಟ್ಟದ ಕಟ್ಟಡವನ್ನು ನಿರ್ಮಿಸುವುದಾಗಿ ತಿಳಿಸಿದರು.
    
68 ಲಕ್ಷ ವೆಚ್ಚದಲ್ಲಿ ಕೆಲವು ಸರ್ಕಾರಿ ಹಿರಿಯ/ಪ್ರೌಢ ಶಾಲೆಗಳಿಗೆ ಶುದ್ಧ ನೀರನ್ನು ಕೊಡುವ ಸಲುವಾಗಿ ಫಿಲ್ಟರ್‍ಗಳನ್ನು ಸಹ ನೀಡಿದ್ದು, ಅದನ್ನು ಶಿಕ್ಷಕರು ಒಳ್ಳೆಯ ರೀತಿಯಲ್ಲಿ ಸದುಪಯೋಗಪಡಿಸಿಕೊಂಡು ಮಕ್ಕಳಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕೆಂದು ತಿಳಿಸಿದರು. ಜೊತೆಗೆ ನಾವು ನೀಡುವ ಎಲ್ಲಾ ಸೌಲತ್ತುಗಳನ್ನು ಬಳಸಿಕೊಳ್ಳುವುದರ ಜೊತೆಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರು ನೀಡುವುದರಿಂದ ಮಕ್ಕಳ ಭವಿಷ್ಯವು ಬದಲಾಗುವುದಲ್ಲದೆ ಅವರೂ ಸಹ ಮುಂದೊಂದು ದಿನ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬಲ್ಲರು ಎಂದರು.
     
ಈ ಸಂದರ್ಭದಲ್ಲಿ ಸ್ಯಾಮ್‍ಸಂಗ್ ಪೈನಾನ್ಸ್ ಗ್ರೂಪಿನ ಸಂತೋಷ್, ರಾಧಾಕೃಷ್ಣ, ಆನಂದ್, ಇಲಾಖೆಯ ಶಿಕ್ಷಣ ಸಂಯೋಜಕ ಆರ್. ಶ್ರೀನಿವಾಸನ್, ಸಿ.ಆರ್.ಪಿ. ಸುಜಾತ, ಬಸವರಾಜ್, ಭಡ್ತಿ ಮುಖ್ಯಶಿಕ್ಷಕರ ಸಂಘದ ಉಪಾಧ್ಯಕ್ಷ ಜಿ. ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ಚಲಪತಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ್  ಗೆಳೆಯರ ಬಳಗದ ಪದಾಧಿಕಾರಿಗಳಾದ ಎಸ್.ನಾರಾಯಣಸ್ವಾಮಿ, ಈರಣ್ಣಗೌಡ, ಚಂದ್ರಪ್ಪ, ಮುಖ್ಯಶಿಕ್ಷಕಿ ಚೌಡಮ್ಮ, ಮುನಿಸ್ವಾಮಿ, ಶೋಭ, ವೇದಾವತಿ, ಚಂದ್ರಿಕಾ, ವೈ.ಜಯಂತಿ, ಸರಸ್ಪತಿ ಮುಂತಾದವರು ಉಪಸ್ಥಿತರಿದ್ದರು.
            
                                    

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...