ಜಿಲ್ಲಾಧಿಕಾರಿ ಕಾರು ಚಾಲಕನಿಂದ ಸೈನಿಕರ ಕಲ್ಯಾಣ ನಿಧಿಗೆ ಒಂದು ದಿನದ ವೇತನ

Source: sonews | By Staff Correspondent | Published on 13th April 2018, 5:20 PM | State News |

ಕೋಲಾರ: ಗಡಿ ಕಾಯುತ್ತಿರುವ ಸೈನಿಕರಿಗೆ ತಮ್ಮ ತಿಂಗಳ ಸಂಬಳದಲ್ಲಿ ಒಂದು ದಿನದ ಹಣವನ್ನು ಸೈನಿಕರ ಕಲ್ಯಾಣನಿಧಿಗೆ ಖಾತೆಗೆ ಜಮಾ ಮಾಡುತ್ತಿರುವ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ಬಿ.ನಾಗರಾಜ್ ಕಾರ್ಯವೈಖರಿಗೆ ಉಪ ರಾಷ್ಟ್ರಪತಿ ವೆಂಕಯ್ಯನಾಯಡು ಹಾಗೂ ರಾಜ್ಯಪಾಲ ವಜೂಬಾಯಿ ವಾಲಾ ರವರು ಇಂದು ಬೆಂಗಳೂರು ರಾಜಭವನದಲ್ಲಿ ಅಭಿನಂದಿಸಿದರು. 
    

ಈಗಾಗಲೇ ತಮ್ಮ ವೃತ್ತಿಯ ಜೊತೆಜೊತೆಗೆ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕ ಬಿ.ನಾಗರಾಜ್ ರವರು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತಹ ಕಾರ್ಯಗಳನ್ನು ಮಾಡುತ್ತಾ ಕೋಲಾರ ಜಿಲ್ಲೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...