ಜಿಲ್ಲೆಯ ಕ್ರೀಡಾಪಟುಗಳ ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ

Source: sonews | By Staff Correspondent | Published on 18th January 2018, 1:11 AM | State News |

 

ಕೋಲಾರ  : ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಸಮಸ್ಯೆಗಳ ಬಗ್ಗೆ ಮತ್ತು ಕ್ರೀಡಾಂಗಣದ ಬಗ್ಗೆ ಚರ್ಚಿಸುವುದಾಗಿ ಕೋಲಾರ ಜಿಲ್ಲಾಧಿಕಾರಿ ಜಿ. ಸತ್ಯವತಿ ತಿಳಿಸಿದರು.
    

ಅವರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೋಲಾರ ಅಥ್ಲೆಟಿಕ್ಸ್ ಜಿಲ್ಲಾ ಕಾರ್ಯದರ್ಶಿ ಕೆ.ಜಯದೇವ್‍ರವರ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. 
ಕೋಲಾರದಲ್ಲಿ ಕ್ರೀಡೆಗಳು ಅಭಿವೃದ್ಧಿಗೊಳ್ಳಬೇಕು ಮತ್ತು ಕ್ರೀಡಾಪಟುಗಳನ್ನು ತಯಾರು ಮಾಡಬೇಕು ಇದಕ್ಕೆ ಬೇಕಾದಂತಹ ಕ್ರೀಡಾಂಗಣವಾಗಲಿ ಅಥವಾ ಸಾಧನ ಸಲಕರಣೆಗಳಾಗಲಿ ಕೊರತೆ ಇದ್ದಲ್ಲಿ ಅಂದು ಎಲ್ಲಾ ಹಿರಿಯ ಕಿರಿಯ ಕ್ರೀಡಾಪಟುಗಳ ಸಮಸ್ಯೆಗಳನ್ನು ಆಲಿಸಿ, ಚರ್ಚಿಸಿ ಪರಿಹಾರ ನೀಡಲಾಗುವುದೆಂದರು. 
ಆದ್ದರಿಂದ ಜಿಲ್ಲೆಯ ಎಲ್ಲಾ ಹಿರಿಯ ಕಿರಿಯ ಕ್ರೀಡಾಪಟುಗಳು ಸಕಾಲದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜನವರಿ 29ರ ಬೆಳಿಗ್ಗೆ 11 ಗಂಟೆ ಹಾಜರಾಗಿ ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಬೇಕೆಂದು ಕೋಲಾರ ಅಥ್ಲೆಟಿಕ್ಸ್ ಜಿಲ್ಲಾ ಕಾರ್ಯದರ್ಶಿ ಕೆ.ಜಯದೇವ್‍ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಕೆ. ಜಗನ್ನಾಥನ್ ಹಾಗೂ ಉಪಾಧ್ಯಕ್ಷ ಆರ್. ಶ್ರೀನಿವಾಸನ್ ಉಪಸ್ಥಿತರಿದ್ದರು.
    

                                   
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...