ಪರಿಸರ ಜಾಗೃತಿ ಜಾಥಾಕ್ಕೆ ಚಾಲನೆ

Source: sonews | By Staff Correspondent | Published on 31st May 2018, 10:46 PM | State News | Don't Miss |


ಕೋಲಾರ: ಇಂದು ಮಾನವನು ಪ್ರಕೃತಿಯ ಜೊತೆ ಹೊಂದಾಣಿಕೆಯನ್ನು ಮರೆತಿದ್ದಾನೆ. ಸ್ವಾರ್ಥಕ್ಕೋಸ್ಕರ ಪ್ರಕೃತಿಯನ್ನು ಹಾಳು ಮಾಡುತ್ತಾನೆ. ಹಿರಿಯರನ್ನು ನೋಡಿಕೊಂಡು ಮುಂದೆ ಮಕ್ಕಳು ಅದನ್ನೇ ಪಾಲಿಸುತ್ತಾರೆ. ಈ ಕಾರಣದಿಂದ ಮಕ್ಕಳಿಗೆ ಪರಿಸರ ಜಾಗೃತಿಯ ಕಾಳಜಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಸರ್ವಶಿಕ್ಷಣ ಅಭಿಯಾನ ಉಪ ಸಮನ್ವಯಾಧಿಕಾರಿ ಎಂ.ಮೈಲೇರಪ್ಪ ತಿಳಿಸಿದರು.
    
ತಾಲ್ಲೂಕಿನ ಹರಟಿಯಲ್ಲಿಂದು ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ಪರಿಸರ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.


    
ಮನುಷ್ಯನ ಸ್ವಾರ್ಥ ಬದುಕು ಆತನ ಬದುಕನ್ನೇ ನಾಶಮಾಡುತ್ತದೆ. ಸಾವಿರಾರು ವರ್ಷಗಳಿಂದ ಪೂರ್ವಜರು ಕಾಪಾಡಿಕೊಂಡು ಬಂದ ಪರಿಸರವನ್ನು ನಾವು ಕಾಪಾಡಿಕೊಂಡು, ಭವಿಷ್ಯಕ್ಕೆ ಉಳಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿ ಹಾಗೂ ಯುವ ಸಮುದಾಯದ ಮೇಲಿದೆ ಎಂದರು.
    
ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರಗಳನ್ನು ವಿತರಿಸಿದ ಜಿಲ್ಲಾ ಮಾದ್ಯಮಿಕ ಶಿಕ್ಷಣ ಅಭಿಯಾನ ಉಪ ಸಮನ್ವಯಾಧಿಕಾರಿ ಟಿ. ಸಿದ್ದೇಶ್ ಮಾತನಾಡಿ ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು  ಸಾರ್ವತ್ರಿಕರಣ ಗೊಳಿಸುವಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
    
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮರಾವತಿ ಮಾತನಾಡಿ ಪರಿಸರ ದಿನಾಚರಣೆಗೂ ಮುನ್ನ ಇಂದಿನಿಂದಲೇ ಪರಿಸರ ಜಾಗೃತಿ ಚರ್ಚೆ, ಭಾಷಣ ಸ್ಪರ್ಧೆಗಳನ್ನು ನಡೆಸಲಿದ್ದು, ವಿದ್ಯಾರ್ಥಿಗಳು ಭಾಗವಹಿಸಬೇಕು ಹಾಗೂ ಹಸಿರು ಕ್ರಾಂತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
    
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾದ್ಯಾಯ ಜಿ. ಶ್ರೀನಿವಾಸ್ ಮಾತನಾಡಿ ಸರ್ಕಾರಿ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಉತ್ತಮ ವ್ಯಕ್ತಿತ್ವಕ್ಕಾಗಿ ಶಿಕ್ಷಣ ಪಡೆಯಬೇಕು ಎಂದರು.  ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಎಂ.ಕೃಷ್ಣಪ್ಪ, ಪಿ.ಎಂ.ಗೋವಿಂದಪ್ಪ, ಎಂ.ಆರ್.ಮೀನಾ, ಹೆಚ್.ಮುನಿಯಪ್ಪ, ಆರ್.ಮಂಜುಳಾ, ಕೆ.ಮಮತಾ ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...