ಶಾಶ್ವತ ನೀರಿಗಾಗಿ ಆಗ್ರಹಿಸಿ ಪ್ರಧಾನಿ ಮೋದಿಗೆ  ಇಪ್ಪುತ್ತು ಸಾವಿರ ಪತ್ರ ರವಾನೆ

Source: sonews | By Staff Correspondent | Published on 4th February 2018, 11:34 PM | State News | Special Report | Don't Miss |

ಕೋಲಾರ : ಕೋಲಾರ ಜಿಲ್ಲೆಯ ನೀರಾವರಿ ಹೋರಾಟಗಾರರಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಿಗಾಗಿ ಆಗ್ರಹಿಸಿ ದೇಶದ ಪ್ರಧಾನಿ ನರೇಂದ್ರ ಮೋದಿಗೆ ಇಪ್ಪತ್ತು ಸಾವಿರ ಪತ್ರಗಳನ್ನು ಬರೆಯಲಾಗಿದೆ.

ಜನವರಿ 20ರಂದು ಕೋಲಾರ ಕ್ರೀಡಾಭಿವೃದ್ಧಿ ಅಕಾಡೆಮಿಯವರು ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಾರ್ವಭೌಮ ಹೆಸರಾಂತ ಗಾಯಕ ಡಾ||ಎಸ್.ಪಿ. ಬಾಲಸುಬ್ರಮಣ್ಯಂರವರು ನಡೆಸಿಕೊಟ್ಟ ಮ್ಯೂಜಿಕಲ್ ನೈಟ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಪ್ಪತ್ತು ಸಾವಿರ ಪ್ರೇಕ್ಷಕರಿಂದ ನೀರಾವರಿ ಹೋರಾಟಗಾರರೇ ಹೆಚ್ಚಾಗಿದ್ದ ಈ ಅಕಾಡೆಮಿಯ ಸದಸ್ಯರ ಮನವಿಯ ಮೇರೆಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಶ್ವತ ನೀರಿಗಾಗಿ ಆಗ್ರಹಿಸಿ ಇಪ್ಪತ್ತು ಸಾವಿರ ಅಂಚೆ ಪತ್ರಗಳನ್ನು ನೆರೆದಿದ್ದ ಜನ ಸಹಿ ಮಾಡಿದ್ದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಶ್ವತ ನೀರಿಗಾಗಿ ಎಸ್.ಬಿ. ಬಾಲಸುಬ್ರಮಣ್ಯಂ, ಗಾಯಕಿ ಅನುರಾಧ ಬಟ್, ಗಾಯಕ ಚಿನ್ಮಯಿ, ಹೆಸರಾಂತ ತಬಲ ಕಲಾವಿದ ವೇಣು, ಜಾನಪದ ಕಲಾವಿದ ಗೋ.ನಾ.ಸ್ವಾಮಿ ಸಹಿ ಮಾಡಿದ್ದರು. ಇವರೊಟ್ಟಿಗೆ ಕಾರ್ಯಕ್ರಮದ ಅತಿಥಿಗಳಾದ ಕೋಲಾರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್, ಓಂ ಶಕ್ತಿ ಚಲಪತಿ, ಕೆ.ವಿ.ಶಂಕರಪ್ಪ, ಕನ್ನಡ ರಕ್ಷಣಾ ವೇದಿಕೆಯ ರಾಘವೇಂದ್ರ, ಸಿ.ಎಂ.ಆರ್. ಶ್ರೀನಾಥ್ ಸಹಿ ಮಾಡಿದ ಪತ್ರಗಳು ಮತ್ತು ಇತರೆ ಎಲ್ಲಾ 20,000 ಪತ್ರಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 3ನೇ ಫೆಬ್ರವರಿ ಶನಿವಾರ ಕೋಲಾರ ಪ್ರಧಾನ ಅಂಚೆ ಕಛೇರಿಯ ಮುಖಾಂತರ  ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಕುರುಬರಪೇಟೆ ವೆಂಕಟೇಶ್, ಚಿನ್ನಿಶ್ರೀನಿವಾಸ್, ಚಂದ್ರಕಾಂತ್ ಸೂರ್ಯವಂಶಿ, ಮಾಯಂಡಿ ಮನೋಹರ್, ಕನ್ನಡ ಪ್ರಕಾಶ್, ಮಧುಕರ್.ಕೆ.ವಿ, ಮಲ್ಲಿಕಾ ಪ್ರಕಾಶ್, ಮಂಜುನಾಥ್, ಐ.ಟಿ.ಐ. ಶಿವು, ನಟರಾಜ್ ಹಾಗೂ ಅಕಾಡೆಮಿಯ ನೀರಾವರಿ ಹೋರಾಟಗಾರರು ಉಪಸ್ಥಿತರಿದ್ದರು.

                             

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...