ಕೋಲಾರ: ರೈತಸಂಘದಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ

Source: sonews | By Staff Correspondent | Published on 1st January 2018, 5:37 PM | State News | Special Report | Don't Miss |

ಕೋಲಾರ: ರೈತರ ಹೆಸರೇಳಿಕೊಂಡು ರಾಜಕಾರಣ ಮಾಡುವ ಸರ್ಕಾರಗಳು ವೈಜ್ಞಾನಿಕ ಬೆಲೆ ನಿಗದಿ ಮಾಡದೇ ರೈತನ ಬೆನ್ನೆಲಬು ಮುರಿದಿದ್ದರೆ, ಸ್ಥಳಿಯ ಜಿಲ್ಲಾಡಳಿತಗಳು ಕಾನೂನು ಚೌಕಟ್ಟಿನಲ್ಲಿ ಬೀಜದಿಂದ ಮಾರುಕಟ್ಟೆಯವರೆಗೂ ರೈತರ ರಕ್ತ ಹೀರುತ್ತಿದ್ದರೂ, ಕಂಡು ಕಾಣದಂತೆ ನಾಟಕವಾಡುವ ಅಧಿಕಾರಿ ವರ್ಗ ಈಗಲಾದರು ರೈತರ ರಕ್ತ ಹೀರುತ್ತಿರುವ ಜಿಲ್ಲೆಯ ವ್ಯವಸ್ಥೆಯನ್ನು ಸರಿಪಡಿಸಿ ರೈತನಿಂದ ಲಂಚ ಪಡೆಯುವುದಿಲ್ಲ ಎಂದು ಕಚೇರಿಗಳ ಮುಂದೆ ನಾಮ ಪಲಕ ಅಳವಡಿಸಿ  ತಾವು ಪಡೆಯುವ ವೇತನ ಮತ್ತು ತಿನ್ನುವ ಅನ್ನದ ಋಣಕ್ಕಾದರೂ ರೈತನ ಶೋಷಣೆ ತಪ್ಪಿಸಿ ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ತರಕಾರಿ ವಿತರಣೆ ಮಾಡುವ ಮೂಲಕ ಆಗ್ರಹಿಸಲಾಯಿತು. 

ರಾಜ್ಯ ಉಪಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೇ, ಗ್ರಾಮ ಪಂಚಾಯಿತಿಗಳ ಮುಂದೆ ಇಂದಿನಿಂದ ಜಿಲ್ಲೆಯಲ್ಲಿ ರೈತರ ಬಳಿ ಲಂಚ ಪಡೆಯದೇ ಕೆಲಸ ಮಾಡುತ್ತೇವೆಂದು ಹಾಗೂ ನಾವು ಲಂಚ ಪಡೆಯುವುದಿಲ್ಲ ಎಂದು ಕಚೇರಿಗಳ ಮುಂದೆ ನಾಮಪಲಕ ಹಾಕಲು ಜಿಲ್ಲಾಡಳಿತಕ್ಕೆ ಸಾದ್ಯವಾಗುತ್ತದೆಯೇ? ಎ.ಪಿ.ಎಂ.ಸಿ ಗಳಲ್ಲಿ ನಡೆಯುತ್ತಿರುವ ಕಮಿಷನ್ ದಂದೆ, ತರಕಾರಿ ಕಡಿತ, ಬೀಳಿ ಚೀಟಿ, ಇವುಗಳಿಗೆ ಕಡಿವಾಣ ಹಾಕಿ. ಬಿತ್ತನೆ ಬೀಜದಿಂದ ರೈತನ ಬೆಳೆ ನಷ್ಟವಾದರೆ ನೂರೊಂದು ಕಾನೂನು ಕೇಳದೆ ಬೀಜ ಕಂಪನಿಯಿಂದ ತಕ್ಷಣ ರೈತರಿಗೆ ಪರಿಹಾರ ನೀಡಿಸಿ. ಬೀಜ ಮತ್ತು ಗೊಬ್ಬರ ಹಾಗೂ ಔಷಧಿಗಳಿಗೆ ರಸೀದಿ ನೀಡದ ಹಾಗೂ ಅಧಿಕ ಬೆಲೆಗೆ ಮಾರುವ  ಅಂಗಡಿಯ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ. ಕೃಷಿ ಇಲಾಖೆಗೆ ಬರುವ ಕಾಂಪೋಸ್ಟ್ ಹಾಗೂ ಜೈವಿಕ ಗೊಬ್ಬರಗಳ ಕಳಪೆ ಗುಣಮಟ್ಟ ಕೃಷಿ ಮತ್ತು ತೋಟಗಾರಿಕೆ, ರೇಷ್ಮೇ ಇಲಾಖೆಯಲ್ಲಿ ನೀಡುವ ಹನಿ ನೀರಾವರಿ, ಯಂತ್ರೋಪಕರಣಗಳು ಅತ್ಯಂತ ಕಳಪೆಯಾಗಿದ್ದು, ಇವುಗಳಿಗೆ ಕೊಡುವ ಸಹಾಯದನವನ್ನು ರೈತರಿಗೆ ನೀಡಿದರೇ ಇದೇ ಯಂತ್ರೋಪಕರಣಗಳು ಕಂಪನಿಗಳು ಯಂತ್ರಗಳಿಗಿಂತ ಗುಣಮಟ್ಟವಾಗಿದ್ದು, ಬೆಲೆಯು 50ರಷ್ಟು ರೈತನಿಗೆ ಉಳಿತಾಯವಾಗುತ್ತದೆ ಆದರೆ ಅಧಿಕಾರಿಗಳ ಕುಮ್ಮಕ್ಕಿನಿಂದ ನಡೆಯುತ್ತಿರುವ  ಈ ಹಗಲು ಲೂಟಿಗೆ ಕಡಿವಾಣ ಹಾಕಲು ಜಿಲ್ಲಾಡಳಿತಕ್ಕೆ ತಾಕತ್ತಿದೆಯೇ ಎಂದು ಸವಾಲಾಕಿದರು. 

ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ ಮಾತನಾಡಿ 40 ವರ್ಷಗಳಿಂದ ಕೋಟಿಗಳ ಲೆಕ್ಕದಲ್ಲಿ ಲಾಭವಿದ್ದು, ರೈತರ ಉದ್ದಾರ ಮಾಡಬೇಕಾದ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಲು ಕೊಡುವ ರೈತನಿಗೆ ವರ್ಷಕೊಮ್ಮೆ ಒಂದು ಬಿರಿಯಾನಿ 100 ರೂ ಬಿಂದಿಗೆ ಕೊಟ್ಟು, ನಾವು ಉತ್ತಮ ಸಹಕಾರಿಗಳು ಎಂದು ಪುಡಿಗಾಸು ಲೆಕ್ಕ ತೋರಿಸಿ, ಕೋಟಿಗಳ ಲೆಕ್ಕದಲ್ಲಿ ಅವ್ಯವಹಾರ ನಡೆದಿರುವ ಡೈರಿಗಳ ಬಗ್ಗೆ ಸಿ.ಬಿ.ಐ ತನಿಖೆಗೆ ಒಪ್ಪಿಸಬೇಕು. ಕೃಷಿ, ತೋಟಗಾರಿಕೆ ರೇಷ್ಮೇ ಇಲಾಖೆಗಳಲ್ಲಿ 10 ವರ್ಷಗಳಿಂದ ನೀಡಿರುವ ಎಲ್ಲಾ ಸಹಾಯದನದ ಅಂಕಿ ಅಂಶಗಳನ್ನು ಸ್ಥಳ ಪರೀಶೀಲನೆ ಮತ್ತು ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು. ಕಂದಾಯ ಮತ್ತು ಸರ್ವೇ ಇಲಾಖೆ ಹೆಜ್ಜೆ ಹೆಜ್ಜೆಗೂ ಲಂಚದ ರೂಪದಲ್ಲಿ ರೈತನ ರಕ್ತ ಹೀರುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ವಿಮಾ ಸೌಲಭ್ಯ, ಬರ ಪರಿಹಾರ  ಇವುಗಳ ಹಗಲು ದರೋಡೆ ಬಗ್ಗೆ ತನಿಖೆ ಆಗಬೇಕು.  ಇಷ್ಟೇಲ್ಲಾ ಶೋಷಣೆಯೂ ರೈತರ ಪರ ರೈತರಿಗಾಗಿ ನಾವು ಎನ್ನುವ ಅಧಿಕಾರಿ ವ್ಯವಸ್ಥಯಲ್ಲಿಯೇ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ತಮಗೆ ಸಾಧ್ಯವಿದ್ದರೇ, ಕಡಿವಾಣ ಹಾಕಿ ಇಲ್ಲವಾದಲ್ಲಿ ರೈತನ ಶಾಪ ತಮ್ಮ ಅಧಿಕಾರ ವ್ಯವಸ್ಥೆಗೆ ತಗಲಿ ಸರ್ವನಾಶ ಆಗುತ್ತೀರೆಂದು ಆಕ್ರೋಶ ವ್ಯಕ್ತಪಡಿಸಿದರು. 
   
ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಮರಗಲ್ ಶ್ರೀನಿವಾಸ್, ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ, ಜಿಲ್ಲಾ ಕಾರ್ಯಾಧ್ಯಕ್ಷ ಸಪ್ತಗಿರಿ ಮಂಜುನಾಥ್, ಹುಲ್ಕೂರು ಹರಿಕುಮಾರ್, ರಂಜೀತ್‍ಕುಮಾರ್ ಆನಂದ ಸಾಗರ್, ಲಾಯರ್ ಸುಬ್ರಮಣಿ ಶಿವು, ಕೆಂಬೋಡಿ ಕೃಷ್ಣೇಗೌಡ, ಸುಪ್ರೀಂಚಲ, ನಗವಾರ ಭರತ್, ಸುರೇಶ್, ಈಕಂಬಳ್ಳಿ ಮಂಜುನಾಥ್, ಕೋರಗಂಡಹಳ್ಳಿ ಮಂಜು, ಎಂ.ಹೊಸಹಳ್ಳಿ ಚಂದ್ರಪ್ಪ, ಕ್ಯಾಸಂಬಳ್ಳಿ ಪ್ರತಾಪ್ ಮುಂತಾದವರು ಉಪಸ್ಥಿತರಿದ್ದರು.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...