ಸಿಗಂದೂರು-ಜೋಗ-ಶಿವನಸಮುದ್ರಗಳಿಗೆ ಕೆಎಸ್‍ಟಿಡಿಸಿ ಸ್ಪೆಷಲ್ ಪ್ಯಾಕೆಜ್

Source: so news | By MV Bhatkal | Published on 17th June 2018, 12:37 PM | State News |

ಬೆಂಗಳೂರು,ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಮಳೆಗಾಲದ ವೈಭವವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರವಾಸಿಗರಿಗೆ ಸಿಗಂದೂರು-ಜೋಗ -ಶಿವನಸಮುದ್ರ ಹಾಗೂ ತಲಕಾಡಿಗೆ ವಿಶೇಷ ಪ್ರವಾಸವನ್ನು ಆಯೋಜಿಸಿದೆ. ಸಿಗಂದೂರು-ಜೋಗ ಜಲಪಾತ ಪ್ರವಾಸ ಎರಡು ದಿನವಾಗಿದ್ದು , ನಿಗಮದ ಬಸ್‍ನಲ್ಲಿ ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮುಂಜಾನೆ ಸಾಗರಕ್ಕೆ ತಲುಪಿ ನಂತರ ಸಿಗಂದೂರಿಗೆ ಕರೆದೊಯ್ದು ಶ್ರೀ ಚೌಡೇಶ್ವರಿ ದೇವಿಯ ದರ್ಶನ ವ್ಯವಸ್ಥೆ ಮಾಡಲಾಗಿದೆ.

ನಂತರ ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಯಲ್ಲದೆ ಶರಾವತಿ ಸಾಹಸ ಶಿಬಿರಕ್ಕೂ ಭೇಟಿ ನೀಡಿ ಅಲ್ಲಿ ವಿವಿಧ ಚಟುವಟಿಕೆಗಳಲ್ಲಿ ಪ್ರವಾಸಿಗರು ಪಾಲ್ಗೊಳ್ಳಬಹುದಾಗಿದೆ.ಇದಕ್ಕೆ ಪ್ರವಾಸ ದರ 2150 ರೂ. ವೆಚ್ಚವಿರುತ್ತದೆ. ಪ್ರತಿ ಶುಕ್ರವಾರ ಮತ್ತು ಶನಿವಾರ ಈ ಪ್ರವಾಸವಿರುತ್ತದೆ. ಇದಲ್ಲದೆ ಶಿವನಸಮುದ್ರ ಮತ್ತು ತಲಕಾಡಿಗೆ ಯಶವಂತಪುರ ಟಿಟಿಎಂಸಿಯಿಂದ ಬಸ್‍ನಲ್ಲಿ ಬೆಳಗ್ಗೆ 7 ಗಂಟೆಗೆ ಹೊರಟು 11 ಗಂಟೆಗೆ ಶಿವನಸಮುದ್ರ , ಗಗನಚುಕ್ಕಿ , ಭರಚುಕ್ಕಿ ಜಲಪಾತ ವೀಕ್ಷಣೆ ಮಧ್ಯರಂಗ ದರ್ಶನ ನಂತರ ತಲಕಾಡು ಮತ್ತು ವೈದ್ಯನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಅದೇ ದಿನ ರಾತ್ರಿ 9 ಗಂಟೆಗೆ ಬೆಂಗಳೂರು ತಲುಪಲಿದೆ. ಇದಕ್ಕೆ 800 ರೂ.ಗಳನ್ನು ನಿಗದಿಪಡಿಸಲಾಗಿದೆ. ಇದಕ್ಕೆ ಪ್ರತಿ ಶನಿವಾರ ಮತ್ತು ಭಾನುವಾರ ಆಯೋಜಿಸಲಾಗುತ್ತದೆ. ಹೆಚ್ಚಿನ ವಿವರಗಳಿಗೆ www.kstdc.co, ಮೊಬೈಲ್ 8970650070 ಸಂಪರ್ಕಿಸಬಹುದು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...