ಕುಡಿದ ಮತ್ತಿನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Source: S O News | By MV Bhatkal | Published on 21st January 2017, 9:46 PM | State News | Don't Miss |

ಬೆಂಗಳೂರು: ಕುಡಿದ ಅಮಲಿನಲ್ಲಿ ಅಣ್ಣನೇ ತಮ್ಮನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಮಹದೇವಪುರದ ಮುನಿರೆಡ್ಡಿ ಗಾರ್ಡನ್ ಬಳಿ ನಡೆದಿದೆ.

ನೇಪಾಳ ಮೂಲದ ರಾಜೇಶ್ ಬಹದ್ದೂರ್(22) ಕೊಲೆಯಾದ ದುರ್ದೈವಿ. ಶುಕ್ರವಾರ ತಡರಾತ್ರಿ 1 ಗಂಟೆಗೆ ಈ ಘಟನೆ ನಡೆದಿದೆ. ಹಂಡತಿ ರಾಧಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ಅಣ್ಣ ಬೀರ್ ಬಹುದ್ದೂರ್ ರಾಜೇಶ್‍ನನ್ನು ಹತ್ಯೆ ಮಾಡಿದ್ದಾನೆ ಅಂತಾ ಹೇಳಲಾಗುತ್ತಿದೆ.

ರಾಜೇಶ್ ಹಾಗೂ ಬೀರ್ ಬಹುದ್ದೂರ್ ಸೆಕ್ಯೂರಿಟಿ ಗಾರ್ಡ್ ಆಗಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿ ಇವರಿಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿದ್ದು, ರಾಜೇಶ್ ಬಹದ್ದೂರ್‍ಗೆ ಚಾಕುವಿನಿಂದ ಇರಿದು ಬೀರ್ ಬಹದ್ದೂರ್ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಬೀರ್ ಬಹುದ್ದೂರ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...