ಬೆಂಗಳೂರು: ಕುಡಿದ ಅಮಲಿನಲ್ಲಿ ಅಣ್ಣನೇ ತಮ್ಮನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಮಹದೇವಪುರದ ಮುನಿರೆಡ್ಡಿ ಗಾರ್ಡನ್ ಬಳಿ ನಡೆದಿದೆ.
ನೇಪಾಳ ಮೂಲದ ರಾಜೇಶ್ ಬಹದ್ದೂರ್(22) ಕೊಲೆಯಾದ ದುರ್ದೈವಿ. ಶುಕ್ರವಾರ ತಡರಾತ್ರಿ 1 ಗಂಟೆಗೆ ಈ ಘಟನೆ ನಡೆದಿದೆ. ಹಂಡತಿ ರಾಧಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ಅಣ್ಣ ಬೀರ್ ಬಹುದ್ದೂರ್ ರಾಜೇಶ್ನನ್ನು ಹತ್ಯೆ ಮಾಡಿದ್ದಾನೆ ಅಂತಾ ಹೇಳಲಾಗುತ್ತಿದೆ.
ರಾಜೇಶ್ ಹಾಗೂ ಬೀರ್ ಬಹುದ್ದೂರ್ ಸೆಕ್ಯೂರಿಟಿ ಗಾರ್ಡ್ ಆಗಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿ ಇವರಿಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿದ್ದು, ರಾಜೇಶ್ ಬಹದ್ದೂರ್ಗೆ ಚಾಕುವಿನಿಂದ ಇರಿದು ಬೀರ್ ಬಹದ್ದೂರ್ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಬೀರ್ ಬಹುದ್ದೂರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ