ಕಾರವಾರ; ೧೨ರಿಂದ ೧೪ರವರೆಗೆ ಮೂರು ದಿನಗಳು ಉತ್ತರ ಕನ್ನಡ ಜಿಲ್ಲಾದ್ಯಂತ ಯಾವುದೇ ಸಭೆ, ಸಮಾರಂಭ, ಮೆರವಣಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದುವೆ, ಮುಂಜಿ, ಇತ್ಯಾದಿ ವೈಯಕ್ತಿಕ ಕಾರ್ಯಕ್ರಮ ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲಾದ್ಯಂತ ೧೧ ತಾಲೂಕುಗಳಲ್ಲಿ ಯಾವುದೇ ಸಭೆ, ಸಮಾರಂಭ, ಮೆರವಣಿಗೆಗಳು, ಬೈಕ್ ರ್ಯಾಲಿಗಳನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.
ಕರ್ನಾಟಕ ಪೊಲೀಸ್ ಕಾಯ್ದೆ ೧೯೫೩ ಕಲಂ ೩೫ರಡಿಯಲ್ಲಿ ಜಿಲ್ಲಾ ದಂಡಾಧಿಕಾರಿಗಳಿಗೆ ಪ್ರದತ್ತವಾದ ಅಧಿಕಾರ ಬಳಿಸಿ ನಿಷೇಧಾಜ್ಞೆ ಆದೇಶಿಸಲಾಗುತ್ತಿದ್ದು, ಅದೇಶ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.