ಕುಮಟಾ: ಹಿಂಸೆಗೆ ಜಾರಿದ ಸಂಘಪರಿವಾರದ ಪ್ರತಿಭಟನೆ; ಪೊಲೀಸ್ ವ್ಯಾನ್ ಬೆಂಕಿಗಾಹುತಿ,ಹಲವು ಪೊಲೀಸರಿಗೆ ಗಾಯ

Source: sonews | By Staff Correspondent | Published on 11th December 2017, 4:58 PM | Coastal News | State News | Incidents | Don't Miss |

ಕುಮಟಾ: ಪರೇಶ್ ಮೇಸ್ತಾ ಸಾವು ಪ್ರಕರಣವನ್ನು ಖಂಡಿಸಿ ಬಿಜೆಪಿ ಹಾಗು ಸಂಘಪರಿವಾರ ಹಮ್ಮಿಕೊಂಡಿದ್ದ ರ್ಯಾಲಿಯಿಂದ ಕುಮಟಾ ಅಕ್ಷರಶಃ ಉದ್ವಿಘ್ನಗೊಂಡಿದೆ.

ಬಂದ್ ಕರೆಯ ಹಿನ್ನೆಲೆಯಲ್ಲಿ ಇಂದು ಕುಮಟಾದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿತ್ತು. ಬೆಳಗ್ಗಿನಿಂದಲೂ ಜನರು, ವಾಹನಗಳ ಓಡಾಟ ಇಲ್ಲದೆ ಕುಮಟಾ ಬಿಕೋ ಎನ್ನುತ್ತಿತ್ತು. ಇದೇ ಸಂದರ್ಭ ಬಿಜೆಪಿ ಹಾಗು ಸಂಘಪರಿವಾರ ರ್ಯಾಲಿಯೊಂದನ್ನು ನಡೆಸಿದ್ದು, ಭಟ್ಕಳದ ಕಡೆಗೆ ಬರುತ್ತಿದ್ದ ಬಸ್ ಗಳನ್ನು ತಡೆದು, ಮುಸ್ಲಿಂ ಪ್ರಯಾಣಿಕರನ್ನು ಗುರಿಯಾಗಿಸಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಸಂದರ್ಭ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾನಿರತರನ್ನು ತಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಬಿಜೆಪಿ ಹಾಗು ಸಂಘಪರಿವಾರ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣವೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಆಕ್ರೋಶಗೊಂಡ ಪ್ರತಿಭಟನಕಾರರು ಪೊಲೀಸ್ ಜೀಪೊಂದಕ್ಕೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಐಜಿಪಿ ವಾಹನ ಚಾಲಕ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವು ಪೊಲೀಸರು ಗಾಯಗೊಂಡಿದ್ದಾರೆ.

ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ, ಓರ್ವ ಗಂಭೀರ: ಪ್ರತಿಭಟನಕಾರರು ನಡೆಸಿದ ಕಲ್ಲುತೂರಾಟದಿಂದ ಮಹಿಳಾ ಪೊಲೀಸ್ ಸಿಬ್ಬಂದಿಯ ತಲೆಗೆ ಗಾಯವಾಗಿದ್ದು, ರಕ್ತ ಒಸರಿದೆ. ಐಜಿಪಿಯವರ ವಾಹನ ಚಾಲಕ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲುತೂರಾಟವನ್ನು ಪೊಲೀಸರು ತಡೆದಿದ್ದು, ಈ ಸಂದರ್ಭ ಪ್ರತಿಭಟನಕಾರರು ಪೊಲೀಸರೇ ಮೇಲೆಯೇ ಕಲ್ಲು ತೂರಿದ್ದು, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...