ಮತದಾರರ ನೋಂದಣಿಗೆ ನ.20 ಕೊನೆಯ ದಿನ: ಚುನಾವಣಾಧಿಕಾರಿ ಸಂಜೀವ್‌ ಕುಮಾರ್

Source: sonews | By Staff Correspondent | Published on 10th October 2018, 11:44 PM | Coastal News | Don't Miss |

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಗೆ 2019ರ ಜನವರಿ 1ಕ್ಕೆ 18ವರ್ಷ ತುಂಬಿದ ಪ್ರತಿಯೊಬ್ಬರು ಮತದಾನಕ್ಕೆ ಅರ್ಹರಾಗಿದ್ದು, ನ.20ರೊಳಗೆ ನೋಂದಣಿ ಮಾಡಿಕೊಳ್ಳಬೇಕೆಂದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ನಿರ್ದೇಶಿಸಿದ್ದಾರೆ.

ಬುಧವಾರ ನಗರದ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಆಯೊಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳನ್ನು ಹೊರತುಪಡಿಸಿ 198 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 4,48,89,191 ಮತದಾರರಿದ್ದಾರೆ ಎಂದು ತಿಳಿಸಿದರು.

ಈಗ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಗೆ ಹೊಸದಾಗಿ ಸೇರ ಬಯಸುವವರು ನ.20ರೊಳಗೆ ಗ್ರಾಮಾಂತರ ಪ್ರದೇಶದಲ್ಲಿ ತಹಶೀಲ್ದಾರ್ ಕಚೇರಿ, ನಗರಗಳಲ್ಲಿ ಕಂದಾಯ ಕಚೇರಿ ಹಾಗೂ ಆನ್‌ಲೈನ್‌ನಲ್ಲಿ ನೋಂದಾಣಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು.

ಜ.4ಕ್ಕೆ ಅಂತಿಮ ಪಟ್ಟಿ ಪ್ರಕಟ: ಮತದಾರರ ಪಟ್ಟಿಗೆ ಅರ್ಜಿ ಸಲ್ಲಿಸಿದ ಹೊಸ ಮತದಾರರ ವೈಯಕ್ತಿಕ ವಿವರ ಹಾಗೂ ವಾಸ ಸ್ಥಳದ ಕುರಿತು ದೃಢೀಕರಿಸಲು ಪರಿಶೀಲನೆ ನಡೆಸಲಾಗುವುದು. ನಂತರ ಜ.4ಕ್ಕೆ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ಬಿಬಿಎಂಪಿ ವ್ಯಾಪ್ತಿ: ಇಲ್ಲಿನ 28ವಿಧಾನಸಭಾ ಕ್ಷೇತ್ರಗಳಲ್ಲಿರುವ ಮತದಾರರು ಕರಡು ಪ್ರತಿಯಲ್ಲಿ 89,57,064 ಮತದಾರರಿದ್ದು, ಹೊಸ ಮತದಾರರ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನ.20ಕೊನೆಯ ದಿನವಾಗಿದ್ದು, ಅರ್ಹ ಪ್ರತಿಯೊಬ್ಬರು ನೋಂದಣಿ ಮಾಡಿಕೊಳ್ಳಬೇಕೆಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಸರಾಸರಿ ಶೇ.66 ರಿಂದ ಶೇ.68ರಷ್ಟು ಮತದಾರರಿಬೇಕು. ಆದರೆ, ಯಶವಂತಪುರ-ಶೇ.73.99, ಕೆ.ಆರ್.ಪುರಂ-72.47, ಯಲಹಂಕ-71.78, ರಾಜರಾಜೇಶ್ವರಿ ನಗರ-ಶೇ.69.67 ಕ್ಷೇತ್ರಗಳಲ್ಲಿ ಹೆಚ್ಚಿನ ಮತದಾರರಿದ್ದಾರೆ. ಹಾಗೂ ಮಹಾಲಕ್ಷ್ಮಿ ಲೇಔಟ್, ಪದ್ಮನಾಭನಗರ, ರಾಜಾಜಿನಗರ, ಜಯನಗರ, ಗಾಂಧಿನಗರ, ಬಿಟಿಎಂ ಲೇಔಟ್‌ಗಳಲ್ಲಿ ಸರಾಸರಿ ಕಡಿಮೆ ಮತದಾರರಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಅ.10ರಿಂದ ನ.20ರವರೆಗೆ ಮತದಾನ ಪಟ್ಟಿಗೆ ನೋಂದಾಯಿಸಿಕೊಳ್ಳುವಾಗ ಗೊಂದಲ, ಸಮಸ್ಯೆಗೆ ಆಸ್ಪದ ಕೊಡದಂತೆ ಮುನ್ನೆಚ್ಚರಿಕೆ ವಹಿಸಲು ರಾಜಕೀಯ ಪಕ್ಷಗಳು ಪ್ರತಿ ಬೂತ್ ಮಟ್ಟದಲ್ಲಿ ಏಜೆಂಟ್‌ನ್ನು ನೇಮಿಸಬೇಕು. ಇದರಿಂದ ಮತದಾರರ ಪಟ್ಟಿ ಪ್ರಕಟಗೊಂಡ ನಂತರ ಭಿನ್ನಾಭಿಪ್ರಾಯಕ್ಕೆ ಆಸ್ಪದ ಇರುವುದಿಲ್ಲ.

-ಸಂಜೀವ್‌ಕುಮಾರ್, ಮುಖ್ಯ ಚುನಾವಣಾಧಿಕಾರಿ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...