ಭಟ್ಕಳ:ಲಕ್ಷದ್ವೀಪದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಭಟ್ಕಳ ಗಡಿಭಾಗದ ನಿವಾಸಿ ಐ.ಎಫ್.ಎಸ್. ಅಧಿಕಾರಿ ಕನ್ನಡಿಗ ಎ.ಟಿ. ದಾಮೋದರ ನಾಯ್ಕ ಮೋದಿಯ ತಂಡದೊಂದಿಗೆ ಜೂನ್ 28ರಿಂದ ಜುಲೈ 9ರ ವರೆಗೆ ಯೂರೋಪ್ ಪ್ರವಾಸ ಕೈಗೊಳ್ಳಲಿದ್ದಾರೆ
ಪ್ರಸ್ತುತ ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ದೇಶದ ಅತೀ ಕಿರಿಯ ವಯಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಕಾರ್ಯನಿರ್ವಹಿಸಿ ಮಹತ್ತರ ಬದಲಾವಣೆಗೆ ನಾಂದಿ ಹಾಡಿದ್ದಾರೆ. ಕರ್ತವ್ಯದಲ್ಲಿನ ಉತ್ಸುಕತೆ, ದೇಶಕ್ಕಾಗಿ ಎನಾದರೂ ಮಾಡುವ ತುಡಿತ ಗಮನಿಸಿದ ಕೇಂದ್ರ ಸರ್ಕಾರ ಅಧ್ಯಯನಕ್ಕಾಗಿ ಯೂರೋಪ ಪ್ರವಾಸಕ್ಕಾಗಿ ರಾಜ್ಯದ ಏಕೈಕ ಅಧಿಕಾರಿಯನ್ನಾಗಿ ಇನರನ್ನು ಆಯ್ಕೆ ಮಡಿದೆ. ಮೂವರು ಕೇಂದ್ರ ಸಂಪುಟ ಸಚಿವರೂ ಹಾಗೂ ದೇಶದ ಹಿರಿಯ ಅಧಿಕಾರಿಗಳನ್ನೊಳಗೊಂಡ 16 ಜನ ಸದಸ್ಯರ ತಂಡದಲ್ಲಿ ಇವರು ಒಬ್ಬರು.
ದೇಶದ ಬೆನ್ನೆಲುಬಾದ ರೈತರ ಅಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಪಾಶ್ಚಿಮಾತ್ಯ ದೇಶಗಳ ಆಧೂನಿಕ ತಂತ್ರಜ್ಞಾನ ಹಾಗೂ ನೀರಾವರಿ ವಿಧಾನಗಳನ್ನು ಅಳವಡಿಸಿಕೊಂಡು ದೇಶದ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಗುರು ಇಟ್ಟುಕೊಂಡಿದೆ. ಆಸ್ಟ್ರೇಲಿಯ ದೇಶದ ವಿಯನ್ನಾದಲ್ಲಿ ಜುಲೈ 1ರಂದು ಆಯೋಜನೆಗೊಂಡ ಅಂತರಾಷ್ಟ್ರೀಯ ಕೃಷಿ ಆಣೆಕಟ್ಟು ಸಮಾವೇಶ ಮತ್ತು ವಿವಿಧ ದೇಶಗಳೊಂದಿಗೆ ಆಯೋಜನೆಗೊಂಡ ಸಭೆಯಲ್ಲಿ ಭಾರತ ದೇಶವನ್ನು ಈ ತಂಡ ಪ್ರತಿನಿಧಿಸಲಿದೆ. ದೇಶದ ಪ್ರವಾಸೋದ್ಯಮ ಅಭಿವೃದ್ಧಿಯ ಸಲುವಾಗಿ ಆಯೋಜನೆಗೊಂಡ ವಿವಿಧ ಕಾರ್ಯಾಗಾರದಲ್ಲಿ ಭಾಗವಹಿಸಿ, ಯೂರೋಪ್ನ ವಿವಿಧ ಸ್ಥಳ ಪ್ರಾತ್ಯಕ್ಷಿಕೆಯನ್ನು ಬೇಟಿ ನೀಡಲಿದೆ.
ದಾಮೋದರ ಅವರು ಕೃಷಿ, ಹಣಕಾಸು, ಆರೋಗ್ಯ ಮೀನುಗಾರಿಕೆ, ಲೋಕೋಪಯೋಗಿ, ಪರಿಸರ, ಪಶುಸಂಗೋಪನೆ, ಆಹಾರ ಮತ್ತು ನಾಗರಿಕ ಸರಬರಾಜು, ಸಹಕಾರ, ಪ್ರವಾಸೋದ್ಯಮ, ಕಾರ್ಮಿಕ, ಅರಣ್ಯ, ಉದ್ಯೋಗ ಮತ್ತು ತರಬೇತಿ, ಮಾಹಿತಿ ತಂತ್ರಜ್ಞಾನ, ಕಾನೂನು ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಮೂಲತಃ ಕೃಷಿ ಕುಟುಂಬದವರಾಗಿದ್ದು ಕೃಷಿಯಲ್ಲಿ ಸ್ನಾತಕೋತ್ತರ ಪದವೀದರರಾದ ಇವರಿಗೆ ಕೃಷಿಯಲ್ಲಿ ಅಪಾರ ಆಸಕ್ತಿ ಹಾಗೂ ದೇಶರ ರೈತವರ್ಗದವರ ಕುರಿತು ವಿಶೇಷ ಕಾಳಜಿ, ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಅವರು ಲಕ್ಷದ್ವೀಪದಲ್ಲಿ ಈಗಾಗಲೇ ಸಾವಯವ ಕೃಷಿ ಮತ್ತು ಇಸ್ರೇಲ್ ದೇಶದ ಆಧುನಿಕ ಹೈಡ್ರೋಪಾನಿಕ್ಸ್ (ಪೋಷಕಾಂಶಯುಕ್ತ ನೀರಿನಲ್ಲಿ ನೇರ ಕೃಷಿ)ವಿಧಾನಗಳನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಇವರ ಕವರತ್ತಿ ಸ್ಮಾರ್ಟ್ ಸಿಟಿ ಯೋಜನೆಗೆ ಈಗಾಗಲೇ ಕೇಂದ್ರ ಸರ್ಕಾರದ ಅನುಮೋದನೆ ದೊರಕಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆಯ ಹೆಚ್ಚಿನ ತರಬೇತಿಯ ಸಂಬಂಧ ಎ.ಟಿ. ದಾಮೋದರ ನಾಯ್ಕ ಇವರನ್ನು ಜುಲೈ 16ರಿಂದ ಆಗಸ್ಟ್ 2ರ ತನಕ ಜಪಾನ ದೇಶಕ್ಕೆ ಕಳುಹಿಸಿಕೊಡಲು ಆದೇಶಿಸಲಾಗಿದೆ. ಕೆಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪ ಬೇಟಿ ನೀಡಿದ್ದ ಸಂದರ್ಭದಲ್ಲಿ ಎ.ಟಿ. ದಾಮೋದರ ನಾಯ್ಕ ರವರು ಪ್ರಸ್ತುತ ಪಡಿಸಿದ್ದ ಪ್ರವಾಸೋದ್ಯಮ ಯೋಜನೆಯ ಮೋದಿಯವರ ಪ್ರಶಂಸೆಗೆ ಪಾತ್ರರಾಗಿದ್ದು ಇವರ ಕರ್ತವ್ಯ ನಿಷ್ಠಗೆ ಒಂದು ಉದಾಹರಣೆ.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಶ್ರೀನಿವಾಸಪುರ: ನವೀಕರಣಗೊಂಡ ಪೊಲೀಸ್ ಠಾಣೆ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭ
ಠಾಣೆಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಈ ವ್ಯಾಪ್ತಿಯ ನೀರಿಕ್ಷಕ ಹಾಗೂ ಸಿಬ್ಬಂದಿ ಮಾಡಿರುವ ಠಾಣಾ ನವೀಕರಣ ಕಾರ್ಯ ಎಲ್ಲರ ...
ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!
ನಾಮಫಲಕಗಳಲ್ಲಿ ಶೇ.೬೦% ಕನ್ನಡ ಕಡ್ಡಾಯ; ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ...
ಸೀಟು ಹಂಚಿಕೆ ವಿವಾದ; ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಬಿರುಕು?
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ...
ಲೋಕಸಭಾ ಚುನಾವಣೆ; ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎಪ್ರಿಲ್ 26 ಹಾಗೂ ಮೇ 7ರಂದು ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ ...