ಹಿಡಿಯುತ್ತಿದ್ದ ವೇಳೆ ಯುವಕನ್ನು ಕಚ್ಚಿ ಗಾಯಗೊಳಿಸಿದ ಹಾವು;ಪ್ರಾಣಾಪಾಯದ ಪಾರು

Source: sonews | By Staff Correspondent | Published on 3rd July 2018, 7:14 PM | Coastal News | Don't Miss |

ಭಟ್ಕಳ: ಹಾವನ್ನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಹಾವು ಕಚ್ಚಿದ ಪರಿಣಾಮ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾ ರಾತ್ರಿ ಭಟ್ಕಳ ಮಗ್ದೂಮ್ ಕಾಲೋನಿಯಲ್ಲಿ ಜರಗಿದೆ.

ಹಾವು ಕಡಿತಕ್ಕೊಳಗಾದ ಯುವಕನನ್ನು ಮಗ್ದೂಮ್ ಕಾಲೋನಿಯ ನಿವಾಸಿ ಅಬ್ದುಲ್ ಮುಯೀಝ್(29) ಎಂದು ಗುರುತಿಸಲಾಗಿದೆ. ಈತ ಹಾವು ಹಿಡಿಯುವುದರಲ್ಲಿ ಖಾತಿಯನ್ನು ಹೊಂದಿದ್ದು ಅದರಲ್ಲಿ ತುಂಬಾ ಪಳಗಿದ್ದ ಎಂದು ಹೇಳಲಾಗುತ್ತಿದೆ. ಆದರೆ ಸೋಮವಾರ ಸಂಜೆ ಒಂದು ಮನೆಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನದಲ್ಲಿದ್ದಾಗ ಹಾವು ಯುವಕನ ಮೇಲೆ ದಾಳಿ ಮಾಡಿ ಕೈಯನ್ನು ಕಚ್ಚಿ ಘಾಸಿಗೊಳಿಸಿದೆ. ಕೂಡಲೇ ಯುವಕನನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ  ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

ವಿಷಯ ತಿಳಿಯುತ್ತಿದ್ದಂತೆ ಭಟ್ಕಳ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ, ಪುರಸಭೆ ಸದಸ್ಯ ಅಬ್ದುಲ್ ರಹೀಮ್ ಸೇರಿದಂತೆ ಮಗ್ದೂಮ್ ಕಾಲೋನಿಯ ಯುವಕರು ಆಸ್ಪತ್ರೆಗೆ ಭೇಟಿ ನೀಡಿ ಹಾವುಕಡಿತಕ್ಕೊಳಕ್ಕಾಗಿರುವ ಯುವಕನ ಆರೋಗ್ಯವನ್ನು ವಿಚಾರಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...