ಮಂಗಳೂರು:ಕಳೆದ ಎರಡು ದಿನಗಳ ಕಾಲ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಹಿಂದಕ್ಕೆ
ಮಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಯ ಭರವಸೆ ನೀಡಿರುವ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳ ಕಾಲ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈ ಬಿಡಲಾಗಿದೆ ಎಂದು ನಿವೇಶನ ರಹಿತರ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಶಕ್ತಿನಗರ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಕ್ತಿನಗರದಲ್ಲಿ ಗುರುತಿಸಲ್ಪಟ್ಟಿರುವ ಜಾಗದಲ್ಲಿ ನಿವೇಶನ ರಹಿತರಿಗೆ ಮನೆ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಅಸಡ್ಡೆ ತೋರಿಸುತಿದ್ದಾರೆ. ನಗರ ಪಾಲಿಕೆ ಮುಂಬಾಗ ನಡೆದ ಮುಷ್ಕರ ನಂತರ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ವಸತಿ ಯೋಜನೆ ಕಲ್ಪಿಸುವ ಭರವಸೆ ನೀಡಿದ್ದಾರೆ ಎಂದರು. ಮುಂದಿನ ಮೂರು ತಿಂಗಳಲ್ಲಿ ನಿವೇಶನಕ್ಕೆ ಬೇಕಾದ ಎಲ್ಲಾ ಪ್ರಕ್ರಿಯೆಗಳು ಕ್ರಮಪ್ರಕಾರ ನಡೆಯಲಿದೆ. ತದನಂತರವೂ ವಿಳಂಬವಾದಲ್ಲಿ ಮತ್ತೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದರು.
ಸುದ್ದಿಗೋಷ್ಟಿಯಲ್ಲಿ ನೂತನ್ ಕೊಂಚಾಡಿ, ಪ್ರೇಮನಾಥ ಮೊದಲಾದವರು ಉಪಸ್ಥಿತರಿದ್ದರು.