ಮಂಗಳೂರು:ಮುಸ್ತಫಾ ಹತ್ಯೆ ಸಂಘಪರಿವಾರದ ಪೂರ್ವ ನಿಯೋಜಿತ ಕೃತ್ಯ-ನ್ಯಾಯಾಂಗ ತನಿಖೆಗೆ ಎಸ್‍ಡಿಪಿಐ ಆಗ್ರಹ

Source: sdpi | By Arshad Koppa | Published on 13th November 2016, 10:24 AM | Coastal News | State News | Incidents |

ಮಂಗಳೂರು, ನ ೧೩ : ಮೈಸೂರಿನ ಕಾರಾಗ್ರಹದಲ್ಲಿ ವಿಚಾರಣಾಧೀನ ಖೈದಿಯಾಗಿದ್ದ ಮುಸ್ತಫಾ ಕಾವೂರು ಎಂಬವರನ್ನು ಸಹಖೈದಿ ಕಿರಣ್ ಶೆಟ್ಟಿ ಮತ್ತು ಇತರರು ಸೇರಿ ಸಂಘಪರಿವಾರದ ಕುಮ್ಮುಕ್ಕುನಿಂದ ಪೂರ್ವನಿಯೋಜಿತವಾಗಿ ಮಾಡಿದ ಕೃತ್ಯವಾಗಿದ್ದು ಇದನ್ನು ಎಸ್‍ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
    

ಅತ್ಯಂತ ಭದ್ರತೆಯಿರುವ ಜೈಲಿನಲ್ಲಿ ವಿಚಾರಣಾಧೀನ ಖೈದಿಯೊಬ್ಬನ ಹತ್ಯೆ ನಡೆದಿರುವುದಿರುವುದರಿಂದ ಈ ಘಟನೆಯಲ್ಲಿ ಸಂಘಪರಿವಾರದ ಷಡ್ಯಂತ್ರಗಳು ಎದ್ದು ಕಾಣುತ್ತಿದೆ. ರಾಜ್ಯ ಸರಕಾರದ ಅಧೀನದಲ್ಲಿ ಬರುವ ಬಂದೀಖಾನೆಯಲ್ಲಿ ಈ ರೀತಿಯ ಘಟನೆ ನಡೆದಿರುವುದರಿಂದ ಘಟನೆಯ ಸಂಪೂರ್ಣ ಹೊಣೆಯನ್ನು ರಾಜ್ಯ ಸರಕಾರವೇ ಹೊರಬೇಕಾಗುತ್ತದೆ. ಈ ಹತ್ಯೆ ನಡೆದಿರುವುದು ಸಂಘಪರಿವಾರದವರ ಪ್ರಚೋದನಾತ್ಮಕ ಹೇಳಿಕೆಗಳನ್ನು ಆಗಾಗ ನೀಡುತ್ತಿರುವುದರಿಂದ ಪ್ರಚೋದನೆಯಾಗಿ ಈ ಕೃತ್ಯ ನಡೆದಿರುವುದು ಸ್ಪಷ್ಟವಾಗಿರುತ್ತದೆ. ಮಾತ್ರವಲ್ಲದೇ ಸಂಸದ ಪ್ರತಾಪ ಸಿಂಹ ಜೈಲಿಗೆ ಆಗಾಗ ಭೇಟಿ ನೀಡಿರುವುದರಿಂದ ಅವರ ಶಾಮೀಲಿನ ಬಗ್ಗೆ ಸಂಶಯವೂ ಎದ್ದು ಕಾಣುತ್ತಿದೆ. ಜೈಲಿನೊಳಗೂ ಕೂಡ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಹ ಸನ್ನಿವೇಶ ನಿರ್ಮಾಣವಾಗುತ್ತಿದೆ. ಈ ಘಟನೆಯಲ್ಲಿ ಎರಡು ಪೊಲೀಸರನ್ನು ಅಮಾನತು ಮಾಡುವುದರ ಮೂಲಕ ಸರಕಾರ ಮತ್ತು ಪೊಲೀಸ್ ಇಲಾಖೆ ಘಟನೆಯನ್ನು ಮರೆಮಾಚಿ ಕೈ ತೊಳೆಯುವಂತಹ ಕೆಲಸ ಮಾಡುತ್ತಿದೆ. ಆದುದರಿಂದ ಅತ್ಯಂತ ಭದ್ರತೆಯಿರುವ ಜೈಲಿನೊಳಗೆ ಮಾರಕಾಯುಧಗಳು ಹೇಗೆ ರವಾನೆಯಾಯ್ತು. ಇದರ ಹಿಂದಿರುವ ಶಕ್ತಿಗಳು ಯಾರೆಲ್ಲಾ ಎಂಬ ಸತ್ಯಾಸತ್ಯತೆ ಹೊರಬರಬೇಕಾದರೆ ಈ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷರಾದ ಹನೀಫ್ ಖಾನ್ ಕೊಡಾಜೆಯವರು ಆಗ್ರಹಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಒಪ್ಪಿಸದೇ ಇದ್ದಲ್ಲಿ ಇದರ ವಿರುದ್ದ ಕಾನೂನು ರೀತಿಯ ಹೋರಾಟವನ್ನು ಮುಂದುವರಿಸುವುದರೆಂದು ಹೇಳಿದರು. ಅದೇ ರೀತಿ ಹತ್ಯೆಯಾದ ಮುಸ್ತಫಾರವರ ಕುಟುಂಬಕ್ಕೆ ಸರಕಾರ 50 ಲಕ್ಷ ಪರಿಹಾರ ಮೊತ್ತವನ್ನು ನೀಡಬೇಕಾಗಿ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...