ತೊಕ್ಕೊಟ್ಟುವಿನ ಸಿಪಿಎಂ ಪಕ್ಷದ ಕಛೇರಿಯನ್ನು ರಾತ್ರಿ ಹೊತ್ತು ದುಷ್ಕರ್ಮಿಗಳು ಬೆಂಕಿ ಹಚ್ಚಿ ಧ್ವಂಸಗೈದ ಘಟನೆಯನ್ನು ಮತ್ತು ಕಾರ್ಯಕ್ರಮದ ಭಿತ್ತಿಪತ್ರಗಳನ್ನು ಹರಿದು ಹಾಕುವಂತಹ ನೀಚ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುತ್ತೇವೆ ಎಂಬ ಸಂಸದರ ಹೇಳಿಕೆಯ ಮುಂದುವರಿದ ಭಾಗವಾಗಿದೆ ಈ ಕೃತ್ಯ ಎಂಬುದು ಸಂಶಯಕ್ಕೆ ಎಡೆಮಾಡಿದೆ. ಫೆಬ್ರವರಿ 25 ರಂದು ಮಂಗಳೂರಿನಲ್ಲಿ ಸಿಪಿಎಂ ಪಕ್ಷ ನಡೆಸಲಿರುವ ಕರಾವಳಿ ಸೌಹಾರ್ಧ ಸಮಾವೇಶಕ್ಕೆ ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸುತ್ತಾರೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಸಂಘಪರಿವಾರ ಕಾರ್ಯಕ್ರಮದ ವಿರುದ್ಧವಾಗಿ ಪ್ರತಿಭಟನೆ ಮತ್ತು ಫೆಬ್ರವರಿ 25 ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆಯನ್ನು ನೀಡಿ ಇಡೀ ಜಿಲ್ಲೆಯಲ್ಲಿ ಕೋಮು ದ್ವೇಷವನ್ನು ಹರಡಿಸಿ ಜಿಲ್ಲೆಯ ಶಾಂತಿಯನ್ನು ಕೆದಡಿಸುವಂತಹ ಹುನ್ನಾರವನ್ನು ವ್ಯವಸ್ಥಿತವಾಗಿ ನಡೆಸುತ್ತಿದ್ದಾರೆ. ನಮ್ಮೊಂದಿಗೆ ರಾಜಕೀಯವಾಗಿ ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯಗಳಿದ್ದರೂ ಕೂಡ ಈ ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಸ್ವಾತಂತ್ರ್ಯ, ಹಕ್ಕು ಮತ್ತು ಅವಕಾಶಗಳನ್ನು ಕೊಟ್ಟಿರುವಾಗ ಇದೆಲ್ಲವನ್ನೂ ಗಾಳಿಗೆ ತೂರಿ ಸಂಘಪರಿವಾರ ಬಂದ್ಗೆ ಕರೆಕೊಟ್ಟು ಜಿಲ್ಲೆಯ ನೆಮ್ಮದಿ ಕೆಡಿಸಿ ಜನಸಮಾನ್ಯರಿಗೆ ತೊಂದರೆಯನ್ನು ನೀಡುತ್ತಿರುವುದು ಅಪಾಯಕಾರಿ ಬೆಳವಣ ಗೆಯಾಗಿದೆ ಇದು ಸಂಘಪರಿವಾರದ ಚಾಳಿಯಾಗಿ ಬಿಟ್ಟಿದೆ. ಇಷ್ಟೆಲ್ಲಾ ನಡೆಯುತ್ತಿರುವಾಗಲೂ ಇದರ ಬಗ್ಗೆ ಕಠಿಣ ಕ್ರಮ ಜರಗಿಸಿ ಅಶಾಂತಿಯನ್ನು ಸೃಷ್ಟಿಸುವವರನ್ನು ಬಂಧಿಸಬೇಕಾದ ಪೊಲೀಸ್ ಇಲಾಖೆ ಕೇವಲ ನೊಟೀಸ್ ಜಾರಿ ಮಾಡಿ ಅವರ ಕೆಲಸದಿಂದ ಕೈ ತೊಳೆದುಕೊಂಡಿದ್ದಾರೆ ಇದರಿಂದ ಸಂಘಪರಿವಾರದ ದುಷ್ಕøತ್ಯವನ್ನು ನಿಲ್ಲಿಸಲು ಸಾಧ್ಯವಿಲ್ಲ. ಕಮಿಷನರ್ ವ್ಯಾಪ್ತಿಯಲ್ಲಿ ಮತ್ತು ಜಿಲ್ಲೆಯ ಹಲವು ಕಡೆಗಳಲ್ಲಿ ಸಂಘಪರಿವಾರ ಪಥಸಂಚಲನ ನಡೆಸಿ ಉದ್ರೇಕಕಾರಿ ಭಾಷಣ ಮಾಡಲು ಮತ್ತು ಫೆಬ್ರವರಿ 24 ರಂದು ಮಂಗಳೂರಿನಲ್ಲಿ ಪ್ರತಿಭಟನಾ ಜಾಥ ನಡೆಸಲು ಅನುಮತಿ ಕೊಡುವ ಪೊಲೀಸ್ ಇಲಾಖೆ, ಇನ್ನಿತರರು ಕಾರ್ಯಕ್ರಮ ನಡೆಸುವಾಗ ಅನುಮತಿಯನ್ನು ಕೊಡದೆ ಜಿಲ್ಲಾದ್ಯಂತ ನಿಷೇಧಾಜ್ಞೆಗೆ ಕರೆಕೊಟ್ಟು ತಾರತಮ್ಯವನ್ನು ನಡೆಸುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವಂತಹ ಷಡ್ಯಂತ್ರಗಳು ಕೂಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ನಡೆಯುತ್ತಿದೆ.
ಈ ರೀತಿಯ ಘಟನೆಗಳು ನಡೆಯುತ್ತಿರುವಾಗಲೂ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಮೌನ ವಹಿಸಿರುವುದು ಎಲ್ಲರಿಗೂ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಆದುದರಿಂದ ತಕ್ಷಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಬಂದ್ ನಡೆಸಿ ಅಶಾಂತಿ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಿ ಬಂಧಿಸಬೇಕೆಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ಖಾನ್ ಕೊಡಾಜೆ ಪತ್ರಿಕಾ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.
Read These Next
ಕಾರವಾರ: ಜಿಲ್ಲೆಯಲ್ಲಿ ಬುಧವಾರ 7 ನಾಮಪತ್ರ ಸಲ್ಲಿಕೆ
12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಜಿಲ್ಲೆಯಲ್ಲಿ ...
ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ
ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...
ದುಬೈಯಲ್ಲಿ ಮಹಾಮಳೆ; 18ಕ್ಕೂ ಹೆಚ್ಚು ಮಂದಿ ಸಾವು; ಜಲಾವೃತ್ತಗೊಂಡ ವಿಮಾಣ ನಿಲ್ದಾಣ
ದುಬೈ: ಸಾಮಾನ್ಯವಾಗಿ ವರ್ಷದ ಈ ಸಮಯದಲ್ಲಿ ಬಿಸಿಲ ಬೇಗೆಯಿರುತ್ತಿದ್ದ ಸಂಯುಕ್ತ ಅರಬ್ ಸಂಸ್ಥಾನವು ಮಂಗಳವಾರ ಸುರಿದ ಭಾರೀ ಮಳೆಗೆ ...
ಉರಿ ಬಿಸಿಲಲ್ಲೂ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಡಾ.ಅಂಜಲಿ ನಿಂಬಾಳ್ಕರ್
ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯರು, ...
ಗ್ಯಾರಂಟಿ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಆರ್ ವಿ ದೇಶಪಾಂಡೆ
ಕಾರವಾರ: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...