ಆರ್.ಎಸ್.ಎಸ್ ನ ರಾಷ್ಟ್ರೀಯ ಮುಸ್ಲಿಂ ಮಂಚ್ ನಿಂದ ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಸಾಮೂಹಿಕ ನಮಾಝ್

Source: sonews | By Staff Correspondent | Published on 11th July 2018, 7:06 PM | National News | Don't Miss |

ಲಕ್ನೋ: ಅಯೋಧ್ಯೆಯ ಚರಿತ್ರೆಯಲ್ಲೇ ಮೊದಲ ಬಾರಿ ಸರಯೂ ನದಿ ದಡದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕುರ್‌ಆನ್ ಪಠಣದೊಂದಿಗೆ ಸಾಮೂಹಿಕ ನಮಾಝ್ ನಡೆಯಲಿದೆ. ರಾಷ್ಟ್ರೀಯ ಮುಸ್ಲಿಂ ಮಂಚ್ ಜುಲೈ 12ರಂದು ಈ ಕಾರ್ಯಕ್ರಮ ಆಯೋಜಿಸಿದೆ. ಹಲವು ಹಿಂದೂಗಳೊಂದಿಗೆ 1500 ಮುಸ್ಲಿಂ ವಿದ್ವಾಂಸರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

‘‘ಅಯೋಧ್ಯೆಯಲ್ಲಿ ಸರಯೂ ನದಿ ಹರಿಯುತ್ತಿರುವಂತೆ ದಂಡೆಯಲ್ಲಿ 1500ಕ್ಕೂ ಅಧಿಕ ಇಸ್ಲಾಂ ವಿದ್ವಾಂಸರು ಪಾಲ್ಗೊಳ್ಳುವ ಬೃಹತ್ ಕಾರ್ಯಕ್ರಮ ಇದಾಗಿದೆ’’ ಎಂದು ರಾಷ್ಟ್ರೀಯ ಮುಸ್ಲಿಂ ಮಂಚ್‌ನ ಮಾಧ್ಯಮ ಸಂಯೋಜಕ ರಝಾ ರಝ್ವಿ ತಿಳಿಸಿದ್ದಾರೆ.

"ವಿದ್ವಾಂಸರು ಸರಯೂ ನದಿಯಲ್ಲಿ ವುಝೂ (ಅಂಗಸ್ನಾನ) ಮಾಡಲಿದ್ದು, ನಂತರ ನಮಾಝ್ ಮಾಡಲಿದ್ದಾರೆ. ಆನಂತರ ಕುರ್ ಆನ್ ಪಠಣವೂ ನಡೆಯಲಿದೆ. ಅಯೋಧ್ಯೆಯಲ್ಲಿ ಶೀಘ್ರ ರಾಮ ಮಂದಿರ ನಿರ್ಮಾಣಕ್ಕಾಗಿ ಇದನ್ನು ಮಾಡುತ್ತಿದ್ದೇವೆ" ಎಂದವರು ಹೇಳಿದರು.

ಜಗತ್ತಿಗೆ ಶಾಂತಿ ಹಾಗೂ ಸೌಹಾರ್ದತೆಯ ಸಂದೇಶ ರವಾನಿಸಲು ಈ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಶಾಂತಿ ಹಾಗೂ ಭ್ರಾತೃತ್ವದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದಿಶೆಯಲ್ಲಿ ಈ ಪ್ರಾರ್ಥನೆ ಕೊಡುಗೆ ನೀಡಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...