ಮುಖ್ಯಮಂತ್ರಿ ಕುಮಾರಸ್ವಾಮಿ-ಮೋದಿ ಭೇಟಿ, ಕಾವೇರಿ ನಿರ್ವಹಣ ಮಂಡಳಿ ಸೇರಿ ಹಲವು ವಿಚಾರ ಚರ್ಚೆ

Source: so news | By MV Bhatkal | Published on 18th June 2018, 10:31 PM | State News |

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ.
ಮಾದ್ಯಮ ವರದಿಯ ಅನುಸಾರ ಇತ್ತೀಚೆಗೆ ರಚನೆಯಾದ ಕಾವೇರಿ ನಿರ್ವಹಣಾ ಮಂಡಳಿ (ಸಿಎಂಎ) ಕುರಿತಂತೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕರ್ನಾಟಕದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲಿನ ಕೊರತೆಯ ಕುರಿತು ಸಹ ಚರ್ಚೆ ನಡೆದಿದೆ. 
ಇದಕ್ಕೂ ಮುನ್ನ ಕುಮಾರಸ್ವಾಮಿ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದರು.
ಇನ್ನು ಸಮ್ಮಿಶ್ರ ಸರ್ಕಾರದ ಅಂಗಪಕ್ಷ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದ ಕುಮಾರಸ್ವಾಮಿ ಸರ್ಕಾರ ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ  ವಿಸ್ತೃತವಾದ ಚರ್ಚೆ ನಡೆಸಿದ್ದಾರೆ.
ಜೂನ್ 19ರಂದು ರಾಹುಲ್ ಗಾಂಧಿ ಜನ್ಮದಿನವಿದ್ದು ಕುಮಾರಸ್ವಾಮಿ ಒಂದು ದಿನದ ಮುನ್ನವೇ ಕಾಂಗ್ರೆಸ್ ಅಧ್ಯಕ್ಷರಿಗೆ ಶುಭ ಹಾರೈಸಿದ್ದಾರೆ. ಕುಮಾರಸ್ವಾಮಿ-ರಾಹುಲ್ ಭೇಟಿಯ ವೇಳೆ  ಜನತಾ ದಳ (ಸೆಕ್ಯುಲರ್) (ಜೆಡಿಎಸ್) ಪಕ್ಷದ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್  ಸಹ ಉಪಸ್ಥಿತರಿದ್ದರು.
ಇದೊಂದು ಸೌಹಾರ್ದದ ಭೇಟಿ ಎಂದು ಜೆಡಿಎಸ್ ಮೂಲಗಳು ಹೇಳಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...