ಭಟ್ಕಳ: ತಾಯಿ ಸಾವನ್ನು ಸಹಿಸದ ವ್ಯಕ್ತಿ ಹೃದಯಘಾತದಿಂದ ಸಾವು

Source: sonews | By Staff Correspondent | Published on 3rd July 2018, 10:32 PM | Coastal News | State News | Don't Miss |


•    ಒಂದೇ ಕುಟುಂಬದಲ್ಲಿ ಇಬ್ಬರ ಸಾವು ಕಂಬನಿ ಮಿಡಿದ ಕುಟುಂಬ

ಭಟ್ಕಳ: ತನ್ನ ತಾಯಿಯ ಹೃದಯ ಸ್ಥಂಭನದಿಂದ ಮೃತಪಟ್ಟ ಸುದ್ದಿ ತಿಳಿದ ಮಗನೂ ಸಹ ಹೃದಯಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಭಟ್ಕಳದ ಮದೀನಾ ಕಾಲೋನಿಯ ಮುಹಿದ್ದೀನ್ ಸ್ಟ್ರೀಟ್ ನಲ್ಲಿ ಮಂಗಳವಾರ ಜರಗಿದೆ.

ಹೃದಯಘಾತಕ್ಕೊಳಗಾಗಿ ಮೃತಪಟ್ಟವರನ್ನು ಶಹರ್ ಬಾನು ಮಲ್ಪಾ (80) ಹಾಗೂ ಇವರ ಪುತ್ರ ಫಕ್ಕಿ ಇಸ್ಮಾಯಿಲ್ ಮಲ್ಪಾ (56) ಎಂದು ತಿಳಿದುಬಂದಿದೆ. 

ಮೂಲಗಳ ಪ್ರಕಾರ ಶಹರ್ ಬಾನು ಮಲ್ಪಾ ಎನ್ನುವವರು ಮಧ್ಯಾಹ್ನ 2ಗಂಟೆಗೆ ತನ್ನ ಮನೆಯಲ್ಲಿ ಹೃದಯ ಸ್ಥಂಭನ ನಿಂತು ಹೋದ ಪರಿಣಾಮ ಸಾವನ್ನಪ್ಪಿದ್ದು  ಮುಹಿದ್ದೀನ್ ಸ್ಟ್ರೀಟ್ ನ 1ನೇ ಕ್ರಾಸ್ ನಲ್ಲಿ ಅವರ ಪುತ್ರ ಫಕ್ಕಿ ಇಸ್ಮಾಯಿಲ್ ಎನ್ನುವವರು ತನ್ನ ತಾಯಿಯ ಮೃತದೇಹವನ್ನು ಕಾಣಲು ಬಂದಿದ್ದು ತನ್ನ ಮನೆಗೆ ಹಿಂತಿರುಗಿ ಹೋದ ಮೇಲೆ ಹೃದಯಘಾತಕ್ಕೊಳಗಾಗಿದ್ದರು ಎನ್ನಲಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಒಂದೆ ಕಡೆ ತಾಯಿ ಮಗ ಇಬ್ಬರ ಅಂತ್ಯ ಸಂಸ್ಕಾರ:  ಒಂದೇ ಕುಟುಂಬದಲ್ಲಿ ಇಬ್ಬರು ಒಂದೇ ದಿನ ಹೃದಯಘಾತಕ್ಕೊಳಗಾಗಿ ಮೃತಪಟ್ಟಿರುವ ಸುದ್ದಿಯಿಂದಾಗಿ ಅವರ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಇವÀರಿಬ್ಬರ ಅಂತ್ಯ ಸಂಸ್ಕಾರವನ್ನು ಮಂಗಳವಾರವೇ ಮಗ್ರೀಬ್ ನಮಾಝ್ ನಂತರ ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ನೆರವೇರಿಸಲಾಯಿತು. ಅಂತ್ಯಸಂಸ್ಕಾರದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...