ಮೂಡಿಗೆರೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಬಿಜೆಪಿ ಯುವಮೋರ್ಚಾ ನಗರಾಧ್ಯಕ್ಷನ ಬಂಧನ

Source: sonews | By Staff Correspondent | Published on 8th January 2018, 4:56 PM | Coastal News | State News | National News | Don't Miss |

ಮೂಡಿಗೆರೆ: ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಧನ್ಯಾ (20) ಆತ್ಮಹತ್ಯಗೆ ಕಾರಣಕರ್ತ ಎನ್ನಲಾದ ಆರೋಪಿಯನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಿಜೆಪಿಯ ಎಂ.ವಿ. ಅನಿಲ್ ಎಂದು ಗುರುತಿಸಲಾಗಿದೆ.

ಈತ ಮೂಡಿಗೆರೆ ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನಾಗಿದ್ದಾನೆ. ಈತ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಸಿ.ಟಿ.ರವಿಯೊಂದಿಗೆ ಗುರುತಿಸಿಕೊಂಡಿರುವ ಪ್ರಭಾವಿ ವ್ಯಕ್ತಿಯಾಗಿದ್ದಾನೆ. 

ದ.ಕ. ಜಿಲ್ಲೆಯ ಬೆಳ್ತಂಗಡಿ ಭಾಗದ ಸಂತೋಷ್ ಎಂಬ ಯುವಕನೋರ್ವ ವಾಟ್ಸ್ಆ್ಯಪ್ ನಲ್ಲಿ ಚಾಟ್ ಮಾಡಿ ಅನ್ಯಮತೀಯ ಯುವಕನೊಂದಿಗೆ ಗೆಳೆತನ ಬೆಳೆಸದಂತೆ ಧಮಕಿ ಹಾಕಿದ್ದನಲ್ಲದೇ ವಾಟ್ಸ್ಆ್ಯಪ್ ಸ್ಕ್ರೀನ್‌ಶಾಟ್ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡಿದ್ದ. ಅದನ್ನು ಮೂಡಿಗೆರೆಯ ಬಿಜೆಪಿ ಯುವ ಮೋರ್ಚಾ ಮತ್ತು ಸಂಘಪರಿವಾರದ ಕಾರ್ಯಕರ್ತರ ಗಮನಕ್ಕೂ ತಂದಿದ್ದ. ಇದನ್ನು ಗಮನಿಸಿದ್ದ ಅನಿಲ್ ಮತ್ತು ತಂಡ ಕಾಲೇಜು ವಿದ್ಯಾರ್ಥಿನಿ ಧನ್ಯಾಳ ಮನೆಗೆ ತೆರಳಿ ಆಕೆಯ ತಂದೆ, ತಾಯಿ ಎದುರು ಧಮಕಿ ಹಾಕಿದ್ದರು.

ಇದರಿಂದ ಧನ್ಯಾ ಮನನೊಂದಿದ್ದರು ಎಂದು ಹೇಳಲಾಗಿದೆ. ಹಾಗೂ ಕಾಲೇಜು ಸಹಿತ ವಿವಿಧ ಕಡೆಗಳಲ್ಲಿ ತನ್ನ ಬಗ್ಗೆ ಜನರು ಈ ಕುರಿತು ಮಾತನಾಡುತ್ತಿರು ವುದನ್ನು ಅರಿತು ಅವಮಾನಿತಗೊಂಡಿದ್ದ ಧನ್ಯಾ ಮನೆಯಲ್ಲಿ ಪೋಷಕರು ಇಲ್ಲದ ಸಮಯ ನೋಡಿಕೊಂಡು ನೇಣು ಬಿಗಿದುಕೊಂಡು ಜ. 6ರಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೂಡಿಗೆರೆ ಛತ್ರ ಮೈದಾನ ಬಡಾವಣೆಯ ಯಾದವ ಮತ್ತು ಸರಸ್ವತಿ ದಂಪತಿಯ ಏಕೈಕ ಪುತ್ರಿ ಧನ್ಯಾ ಅನ್ಯಮತೀಯ ಯುವಕನೊಂದಿಗೆ ಗೆಳೆತನ ಬೆಳೆಸಿದ್ದಾಳೆಂದು ಆರೋಪಿಸಿ ಆಕೆಯನ್ನು ಬಿಜೆಪಿ ಯುವಮೋರ್ಚಾ ನಗರಾಧ್ಯಕ್ಷ ಅನಿಲ್ ಮತ್ತಿತರ ಬಿಜೆಪಿ ಮತ್ತು ಸಂಘಪರಿವಾರದ ಪದಾಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದರು.

ಧನ್ಯಾ ಆತ್ಮಹತ್ಯೆ ಬಳಿಕ ಆರಂಭದಲ್ಲಿ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಪಿತೂರಿಗಳು ನಡೆದಿದ್ದವು. ಮೊದಲ ಸಲ ಬರೆದ ಪ್ರಾಥಮಿಕ ವರದಿಯಲ್ಲಿ ಧನ್ಯಾಳ ತಂದೆ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಪೆ ಹಾಕಲಾಗಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಸಂಜೆ ನಂತರ ಪೊಲೀಸರು ಮರು ಎಫ್ ಐ ಆರ್ ದಾಖಲಿಸಿ, ನಾಲ್ವರು ಆರೋಪಿಗಳನ್ನು ಗುರುತಿಸಿದ್ದರು.

ಆರಂಭದಲ್ಲಿ ಪ್ರಭಾವಿಗಳ ಒತ್ತಡಗಳಿಗೆ ಮಣಿದ ಪೊಲೀಸರ ನಡೆಯನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಅನೇಕರು ತೀವ್ರವಾಗಿ ಟೀಕಿಸಿದ್ದರು. ವಾಟ್ಸ್ಆ್ಯಪ್ ನಲ್ಲಿ ಸಾಕ್ಷ್ಯಾಧಾರಗಳಿದ್ದರೂ ಪೊಲೀಸರು ಪ್ರಾಥಮಿಕ ವರದಿಯನ್ನು ಆರೋಪಿಗಳ ರಕ್ಷಣೆ ಮಾದರಿಯಲ್ಲಿ ಬರೆದಿರುವ ಆರೋಪಗಳು ಕೇಳಿ ಬಂದಿತ್ತು. ಕೊನೆಗೂ ಎಚ್ಚೆತ್ತ ಪೊಲೀಸರು ನಾಲ್ವರ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಆರೋಪಿಗಳಲ್ಲಿ ಓರ್ವನಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬಂಧಿಸಿದ್ದಾರೆ.

ಆರೋಪಿಗಳಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ತಲೆಮರೆಸಿಕೊಂಡ ಆರೋಪಿಗಳಿಗಾಗಿ ವ್ಯಾಪಕ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಮೂಡಿಗೆರೆಯ ಧನ್ಯಾ ಅವರ ಮನೆಗೆ ಪೊಲೀಸರು ತೆರಳಿ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಯುವಕರ ತಂಡವೊಂದು ಮನೆಗೆ ತೆರಳಿ ಧನ್ಯಾರಿಗೆ ಬೆದರಿಕೆ ಹಾಕಿರುವ ಮತ್ತು "ನಿಮ್ಮ ಮಗಳು ಮುಸ್ಲಿಂ ಹುಡುಗನ ಜೊತೆ ತಿರುಗಾಡುತ್ತಿದ್ದಾಳೆ. ಲವ್ ಜಿಹಾದ್‌ಗೆ ಬಲಿಯಾಗಿದ್ದಾಳೆ" ಎಂದು ಯುವಕರು ಹೇಳಿರುವ ಬಗ್ಗೆ ಮಾಹಿತಿ ದೊರಕಿದೆ. ಧನ್ಯಾ ಡೆತ್‌ನೋಟ್‌ನಲ್ಲಿ ಕೂಡ ಇದನ್ನು ಬರೆದಿಟ್ಟಿದ್ದಾಳೆ. ನಾನು ಹೇಗೆ ಸಮಾಜದಲ್ಲಿ ಬದುಕಲಿ ಎಂದು ಪ್ರಶ್ನಿಸಿದ್ದಾಳೆ. ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ಮೆಸೇಜ್‌ನಲ್ಲಿ ಹಲವರು ಕಮೆಂಟ್ ಮಾಡಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಎಸ್ಪಿ ಅಣ್ಣಾಮಲೈ ತಿಳಿಸಿದ್ದಾರೆ.

sp_annamalai_video : https://youtu.be/hBP0EZ8zaDQ

ಕೃಪೆ: vbnewsonline

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...