ಮನುಷ್ಯನನ್ನು ಕೊಲ್ಲುವುದು ಯಾವ ಆರ್ಟ್ ಆಫ್ ಲಿವಿಂಗ್?

Source: sonews | By Staff Correspondent | Published on 8th March 2018, 12:12 AM | National News | Don't Miss |

ಮುಂಬೈ: ತನ್ನ ಮುಖವಾಣಿ ಸಾಮ್ನಾದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್‌ರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ ಅಯೋಧ್ಯೆ ವಿಷಯದಲ್ಲಿ ಮೂಗುತೂರಿಸದಂತೆ ಆಧ್ಯಾತ್ಮಿಕ ಗುರುವಿಗೆ ಸೂಚಿಸಿದೆ.

ಬಾಬರಿ ಮಸೀದಿ-ರಾಮ ಮಂದಿರ ವಿವಾದವನ್ನು ಶೀಘ್ರದಲ್ಲಿ ಬಗೆಹರಿಸದಿದ್ದರೆ ಭಾರತವು ಸಿರಿಯವಾಗಲಿದೆ ಎಂದು ಹೇಳುವ ಮೂಲಕ ಶ್ರೀ ರವಿಶಂಕರ್ ಅವರು ಹಿಂಸಾಚಾರ ಮತ್ತು ಗೊಂದಲಕ್ಕೆ ಪರವಾನಿಗೆ ನೀಡಿದ್ದಾರೆ ಎಂದು ಶಿವಸೇನೆ ತಿಳಿಸಿದೆ. ರಾಮ ಮಂದಿರ ವಿಷಯವನ್ನು ಐಸಿಸ್ ಜೊತೆ ಥಳುಕು ಹಾಕುವ ಮೂಲಕ ರವಿಶಂಕರ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ. ಒಂದು ಆಧ್ಯಾತ್ಮಿಕ ಗುರುವಿಗೆ ಇದು ಹೊಂದುವುದಿಲ್ಲ ಎಂದು ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿದೆ. ರಾಮ ಮಂದಿರ ವಿಷಯವನ್ನು ರವಿಶಂಕರ್ ಸುದ್ದಿಯಲ್ಲಿರುವ ಸಲುವಾಗಿ ಬಳಸುತ್ತಿದ್ದಾರೆ. ಮನುಷ್ಯನನ್ನು ಕೊಲ್ಲುವುದು ಅಥವಾ ಅಂಥ ಬೆದರಿಕೆ ಹಾಕುವುದು ಯಾವ ರೀತಿಯ ಆರ್ಟ್ ಆಫ್ ಲಿವಿಂಗ್?, ಭಾರತ ಎಂದೂ ಸಿರಿಯ ಆಗಲು ಸಾಧ್ಯವಿಲ್ಲ. ಅದನ್ನು ಅವರು ಮೊದಲು ಅರಿಯಬೇಕು. ಈ ಗುರು ಮೊದಲು ತಮ್ಮ ಖಾಸಗಿ ವಿಮಾನದಲ್ಲಿ ಇರಾಕ್ ಮತ್ತು ಸಿರಿಯಗೆ ಹೋಗಿ ಅಲ್ಲಿ ತಮ್ಮ ಆರ್ಟ್ ಆಫ್ ಲಿವಿಂಗ್ ಮೂಲಕ ಶಾಂತಿಯ ಸಂದೇಶವನ್ನು ಹರಡಬೇಕು ಎಂದು ಸಾಮನಾದಲ್ಲಿ ಬರೆಯಲಾಗಿದೆ.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...