ಮುಂಡಗೋಡ : ಬಿ.ಜೆ.ಪಿ. ಮುಖಂಡ ಶಿವರಾಜ ಸುಭೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Source: nazir | By Arshad Koppa | Published on 3rd August 2017, 7:55 AM | Coastal News | Guest Editorial |

ಮುಂಡಗೋಡ : ಜೆಡಿಎಸ್ ಮುಖಂಡರಾದ ರಾಮಣ್ಣ ಕುನ್ನೂರ ಮತ್ತು ತಾಲೂಕಿನ ಇಂದೂರ ಗ್ರಾಮದ ಬಿ.ಜೆ.ಪಿ. ಮುಖಂಡ ಶಿವರಾಜ ಸುಭೇದಾರ ಅವರು ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ ಅವರ ಸಮ್ಮುಖದಲ್ಲಿ ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾದರು.
     ಈ ಸಂದರ್ಭದಲ್ಲಿ ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ಪಕ್ಷ ಸೇರ್ಪಡೆಯಾದ ರಾಮಣ್ಣ ಕುನ್ನೂರ ಮತ್ತು ಶಿವರಾಜ ಸುಭೇದಾರ ಅವರನ್ನು ಕಾಂಗ್ರೆಸ ಪಕ್ಷದಲ್ಲಿ ಪ್ರೀತಿ, ವಿಶ್ವಾಸದಿಂದ ನೋಡುತ್ತೇವೆ. ಅಲ್ಲದೇ ಇವರಿಬ್ಬರ ಅನುಭವವನ್ನು ಪಕ್ಷ ಸಂಘಟನೆಯಲ್ಲಿ ಬಳಸಿಕೊಳ್ಳುತ್ತೇವೆ ಎಂದರು. 
     ತಾಲೂಕಾ ಕಾಂಗ್ರೆಸ ಅಧ್ಯಕ್ಷರಾದ ರವಿಗೌಡ ಪಾಟೀಲ, ಪ.ಪಂ.ಅಧ್ಯಕ್ಷ ರಫೀಕ ಇನಾಂದಾರ, ಪ.ಪಂ.ಉಪಾಧ್ಯಕ್ಷ ಫಕ್ಕಿರಪ್ಪ ಅಂಟಾಳ, ತಾ.ಪಂ.ಸದಸ್ಯ ಜ್ಞಾನದೇವ ಗುಡಿಯಾಳ, ಮುಖಂಡರಾದ ಮಹ್ಮಗೌಸ ಮಕಾನದಾರ, ರಾಮಣ್ಣ ಪಾಲೇಕರ ಆಸೀಫ ಮಕಾನದಾರ ಮುಂತಾದವರಿದ್ದರು. 
     

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...