ಮುಂಡಗೋಡ: ಜೂ.21ರಂದು ಮುಂಡಗೋಡ ಉದ್ಯೋಗ ಮೇಳ
ಮುಂಡಗೋಡ : ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್.(ಗ್ರಾಮೀಣಾಭಿವೃದ್ದಿ ಮತ್ತು ಪಮಚಾಯತ ರಾಜ್ ಇಲಾಖೆ), ಜಿಲ್ಲಾ ಪಂಚಾಯತ ಉತ್ತರಕನ್ನಡ, ತಾಲೂಕ ಪಂಚಾಯತ ಮುಂಡಗೋಡ, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಒಂದು ದಿನದ ಉದ್ಯೋಗ ಮೇಳವು ದಿ.21ರಂದು ಬೆಳಿಗ್ಗೆ 10ಗಂಟೆಗೆ ಮುಂಡಗೋಡದ ವಿವೇಕಾನಂದ ಬಯಲುರಂಗ ಮಂದಿರದಲ್ಲಿ ನಡೆಯಲಿದೆ.
ಈ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದಾರೆ. ತಾ.ಪಂ.ಅಧ್ಯಕ್ಷೆ ದಾಕ್ಷಾಯಣಿ ಸುರಗೀಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಜಿ.ಪಂ.ಅಧ್ಯಕ್ಷೆ ಜಯಶ್ರೀ ಮೊಗೇರ, ಸಂಸದ ಅನಂತಕುಮಾರ ಹೆಗಡೆ, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ಎಲ್.ಘೋಟ್ನೇಕರ್ ಮತ್ತು ಎಸ್.ವಿ.ಸಂಕನೂರ, ಜಿ.ಪಂ.ಉಪಾಧ್ಯಕ್ಷ ಸಂತೋಷ ರೇಣುಕೆ, ಮುಂಡಗೋಡ ಪ.ಪಂ.ಅಧ್ಯಕ್ಷ ರಫೀಕ ಇನಾಂದಾರ, ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಟಿ.ಪಾಟಿಲ, ಜಿ.ಪಂ.ಸದಸ್ಯರಾದ ರವಿಗೌಡ ಪಾಟೀಲ ಮತ್ತು ಜಯಮ್ಮ ಹಿರೇಹಳ್ಳಿ, ತಾ.ಪಂ.ಉಪಾಧ್ಯಕ್ಷ ಕೃಷ್ಣಮೂರ್ತಿ ನಾಡಿಗ, ಪ.ಪಂ.ಉಪಾಧ್ಯಕ್ಷ ಫಕ್ಕೀರಪ್ಪ ಅಂಟಾಳ ಆಗಮಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಬೇಕಲ್, ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಆಗಮಿಸಲಿದ್ದಾರೆ ಎಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಲ್.ಭೈರವಾಡಗಿ ಮತ್ತು ತಹಶೀಲದಾರ ಅಶೋಕ ಗುರಾಣಿ ತಿಳಿಸಿದ್ದಾರೆ.