ಅಜಾತ್ ಶತ್ರು ಭಾರತ ರತ್ನ ಅಟಲ್ ಬಿಹಾರಿ ವಾಜಪೆಯವರಿಗೆ ಶೃದ್ಧಾಂಜಲಿ

Source: sonews | By Staff Correspondent | Published on 17th August 2018, 11:08 PM | Coastal News |

ಮುಂಡಗೋಡ : ಭಾರತದ ಮಾಜಿ ಪ್ರಧಾನ ಮಂತ್ರಿ, ಅಜಾತ ಶತ್ರು, ದೇಶಕಂಡ ಅಪ್ರತಿಮ ಜನನಾಯಕ ಭಾರತ ರತ್ನ ಅಟಲ್ ಬಿಹಾರಿ ವಾಜಪೆ ಯವರ ನಿಧನಕ್ಕೆ ತಾಲೂಕಿನ ವಿವಿಧಡೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಶುಕ್ರವಾರ ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ  ವಾಜಪೆಯವರ ಶ್ರದ್ಧಾಂಜಲಿ ಕಾರ್ಯಕರ್ಮ ಹಮ್ಮಿಕೊಳ್ಳಲಾಗಿತ್ತು. ವಾಜಪೆಯವರ  ಭಾವಚಿತ್ರಕ್ಕೆ ಪುಷ್ಪ ನಮನ ಹಾಗೂ ಅಶ್ರುತರ್ಪಣ ಸಲ್ಲಿಸಿ ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು. ತದನಂತರ ಹಾಜರಿದ್ದ ಗಣ್ಯರು ವಾಜಪೇ ಯವರ ಕುರಿತು ಗುಣಗಾನ ಮಾಡಿ ನುಡಿನಮನ ಸಲ್ಲಿಸಿದರು

ನಂತರ ಶಿವಾಜಿ ಸರ್ಕಲ್ ನಲ್ಲಿ ವಾಜಪೆಯವರ ಭಾವಚಿತ್ರಕ್ಕೆ ಮಾಲರ್ಪಣೆಮಾಡಿ ಪುಷ್ಟನಮನ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಲಾಯತು.

ಮಾಜಿ ಶಾಸಕ ವಿ.ಎಸ್.ಪಾಟೀಲ್, ಜಿ.ಪಂ ಸದಸ್ಯ ಎಲ್.ಟಿ.ಪಾಟೀಲ್, ಬಸವರಾಜ ಓಶಿಮಠ, ಗುಡ್ಡಪ್ಪ ಕಾತೂರ, ಮಹ್ಮದಗೌಸ ಅತ್ತಾರ, ಶರೀಫ ಕರಿಮಸಾಬನವರ, ಗಣೇಶ ಶಿರಾಲಿ, ಅಶೋಕ ಚಲವಾದಿ, ಕೆಂಜೋಡಿಗಲಿಬಿ, ಉಮೇಶ ಬಿಜಾಪುರ, ಅನಿಸ್ ಅತ್ತಾರ, ನಾಗಭೂಷಣ ಹಾವಣಗಿ, ನಾಗರಾಜ ಕುನ್ನೂರ, ಟಿಬೇಟಿಯನ್ ಬೌದ್ಧಬಿಕ್ಕುಗಳು, ಬಸವರಾಜ ಹರಿಜನ, ಮಹೇಶ ಹೊಸಕೊಪ್ಪ ಸೇರಿದಂತೆ ಮುಂತಾದವರು ವಾಜಪೆಯವರಿಗೆ ಶೃದ್ಧಾಂಜಲಿ ಅರ್ಪಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...