ಬಿಜೆಪಿಯವರು ೧ ರೂಪಾಯಿ ಕೆಲಸ ಮಾಡಿ ೯ ರೂಪಾಯಿ ಪ್ರಚಾರ ಪಡೆಯುತ್ತಾರೆ : ಶಿವರಾಮ ಹೆಬ್ಬಾರ

Source: sonews | By Staff Correspondent | Published on 27th July 2017, 7:43 PM | Coastal News | Don't Miss |

ಮುಂಡಗೋಡ: ಕಾಂಗ್ರೆಸ ಪ್ರಚಾರದ ಕೊರತೆಯಿಂದ ಹಿಂದುಳಿದಿದೆ. ಆದರೆ ನಾವು ೧೦ ರೂಪಾಯಿ ಕೆಲಸ ಮಾಡಿದರೂ ೧ ರೂಪಾಯಿಯಷ್ಟು ಪ್ರಚಾರ ಪಡೆಯುವುದಿಲ್ಲ. ಇದೇ ನಮ್ಮ ಹಾಗೂ ಬಿಜೆಪಿ ನಡುವೆ ಇರುವ ವ್ಯತ್ಯಾಸ ಎಂದು ಯಲ್ಲಾಪುರ-ಮುಂಡಗೋಡ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಅವರು ತಾಲೂಕಿನ ಉಗ್ಗಿನಕೇರಿ ಗ್ರಾಮದ ಸಿದ್ದಿ ಜನಾಂಗಕ್ಕೆ ಸರ್ಕಾರದಿಂದ ನೀಡಲಾಗುವ ಮೊಟ್ಟೆ, ದ್ವಿದಳ ದಾನ್ಯ, ಎಣ್ಣೆ, ಅಕ್ಕಿ ಸೇರಿದಂತೆ ಆಹಾರ ಪದಾರ್ಥಗಳನ್ನು ವಿತರಿಸಿ ಮಾತನಾಡುತ್ತಿದ್ದರು.
ಬುಡಕಟ್ಟು ಜನಾಂಗವನ್ನು ಮುಖ್ಯವಾಹಿನಿಗೆ ತಂದು ಸಾಮಾನ್ಯರಂತೆ ಜೀವನ ಸಾಗಿಸಲು ಅನುವು ಮಾಡಿಕೊಡುವ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ ಸರ್ಕಾರ ಎಲ್ಲ ವರ್ಗಗಳಿಗೂ ಮೂಲಭೂತ ಸೌಲಭ್ಯ ಒದಗಿಸುತ್ತಿದೆ ಎಂದರು
ಇಡೀ ರಾಜ್ಯದಲ್ಲಿ ಕೇವಲ ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಜನಾಂಗ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿರುವುದರಿಂದ ಈ ಸೌಲಭ್ಯ ಸಿಗುತ್ತಿದೆ. ಇದರ ಸದುಪಯೋಗಪಡೆದುಕೊಳ್ಳಬೇಕು. ಅಲ್ಲದೇ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡದೆ ಸರ್ಕಾರದ ಸೌಲಭ್ಯ ಪಡೆದುಕೊಂಡು ಮಕ್ಕಳನ್ನು ಸುಶಿಕ್ಷಿತರನ್ನಾಗಿ ಮಾಡಿದರೆ ಪ್ರಗತಿ ತಾನಾಗಿಯೇ ಆಗುತ್ತದೆ ಎಂದು ಕಿವಿ ಮಾತು ಹೇಳಿದರು. 
ಕಳೆದ ೩-೪ ವರ್ಷಗಳಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈವರೆಗೆ ಸುಮಾರು ೩೬ ಸಾವಿರ ಕೋಟಿಯಷ್ಟು ಬೆಳೆ ಹಾನಿಯನ್ನು ರೈತರು ಅನುಭವಿಸಿದ್ದಾರೆ. ೨೦೦೬ ರಲ್ಲಿ ಕೇಂದ್ರದಲ್ಲಿ ಯು.ಪಿ.ಎ ಸರ್ಕಾರವಿದ್ದಾಗ ೭೨ ಸಾವಿರ ಕೋಟಿ ಸಾಲ ಮನ್ನಾ ಮಾಡಿತ್ತು. ಅದರಂತೆ ಈಗಿನ  ಮೋದಿ ಸರ್ಕಾರಕ್ಕೆ ಸಾಲ ಮನ್ನಾ ಮಾಡಲೇಕೆ ಆಗಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರದಂತೆ ಕೇಂದ್ರ ಸರ್ಕಾರ ಕೂಡ ಸಾಲ ಮನ್ನಾ ಮಾಡಲಿ ಎಂದು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದೆಂದು ಹೇಳಿದರು. 
ಜಿ.ಪಂ ಸದಸ್ಯ ರವಿಗೌಡ ಪಾಟೀಲ, ತಾಲೂಕು ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ದೇವು ಜಾನು ಪಾಟೀಲ ತಾ.ಪಂ ಸದಸ್ಯ ಜ್ಞಾನದೇವ ಗುಡಿಯಾಳ, ರಮೇಶ ರಾಯ್ಕರ, ಗ್ರಾ.ಪಂ ಅಧ್ಯಕ್ಷ ಬಸವರಾಜ ನಡುವಿನಮನಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸಾಳುಂಕೆ, ಸಿದ್ದು ಹಡಪದ ಮುಂತಾದವರು ಉಪಸ್ಥಿತರಿದ್ದರು.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...