ಮುಂಡಗೋಡ: ಕಾಂಗ್ರೆಸ ಪ್ರಚಾರದ ಕೊರತೆಯಿಂದ ಹಿಂದುಳಿದಿದೆ. ಆದರೆ ನಾವು ೧೦ ರೂಪಾಯಿ ಕೆಲಸ ಮಾಡಿದರೂ ೧ ರೂಪಾಯಿಯಷ್ಟು ಪ್ರಚಾರ ಪಡೆಯುವುದಿಲ್ಲ. ಇದೇ ನಮ್ಮ ಹಾಗೂ ಬಿಜೆಪಿ ನಡುವೆ ಇರುವ ವ್ಯತ್ಯಾಸ ಎಂದು ಯಲ್ಲಾಪುರ-ಮುಂಡಗೋಡ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಅವರು ತಾಲೂಕಿನ ಉಗ್ಗಿನಕೇರಿ ಗ್ರಾಮದ ಸಿದ್ದಿ ಜನಾಂಗಕ್ಕೆ ಸರ್ಕಾರದಿಂದ ನೀಡಲಾಗುವ ಮೊಟ್ಟೆ, ದ್ವಿದಳ ದಾನ್ಯ, ಎಣ್ಣೆ, ಅಕ್ಕಿ ಸೇರಿದಂತೆ ಆಹಾರ ಪದಾರ್ಥಗಳನ್ನು ವಿತರಿಸಿ ಮಾತನಾಡುತ್ತಿದ್ದರು.
ಬುಡಕಟ್ಟು ಜನಾಂಗವನ್ನು ಮುಖ್ಯವಾಹಿನಿಗೆ ತಂದು ಸಾಮಾನ್ಯರಂತೆ ಜೀವನ ಸಾಗಿಸಲು ಅನುವು ಮಾಡಿಕೊಡುವ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ ಸರ್ಕಾರ ಎಲ್ಲ ವರ್ಗಗಳಿಗೂ ಮೂಲಭೂತ ಸೌಲಭ್ಯ ಒದಗಿಸುತ್ತಿದೆ ಎಂದರು
ಇಡೀ ರಾಜ್ಯದಲ್ಲಿ ಕೇವಲ ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಜನಾಂಗ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿರುವುದರಿಂದ ಈ ಸೌಲಭ್ಯ ಸಿಗುತ್ತಿದೆ. ಇದರ ಸದುಪಯೋಗಪಡೆದುಕೊಳ್ಳಬೇಕು. ಅಲ್ಲದೇ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡದೆ ಸರ್ಕಾರದ ಸೌಲಭ್ಯ ಪಡೆದುಕೊಂಡು ಮಕ್ಕಳನ್ನು ಸುಶಿಕ್ಷಿತರನ್ನಾಗಿ ಮಾಡಿದರೆ ಪ್ರಗತಿ ತಾನಾಗಿಯೇ ಆಗುತ್ತದೆ ಎಂದು ಕಿವಿ ಮಾತು ಹೇಳಿದರು.
ಕಳೆದ ೩-೪ ವರ್ಷಗಳಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈವರೆಗೆ ಸುಮಾರು ೩೬ ಸಾವಿರ ಕೋಟಿಯಷ್ಟು ಬೆಳೆ ಹಾನಿಯನ್ನು ರೈತರು ಅನುಭವಿಸಿದ್ದಾರೆ. ೨೦೦೬ ರಲ್ಲಿ ಕೇಂದ್ರದಲ್ಲಿ ಯು.ಪಿ.ಎ ಸರ್ಕಾರವಿದ್ದಾಗ ೭೨ ಸಾವಿರ ಕೋಟಿ ಸಾಲ ಮನ್ನಾ ಮಾಡಿತ್ತು. ಅದರಂತೆ ಈಗಿನ ಮೋದಿ ಸರ್ಕಾರಕ್ಕೆ ಸಾಲ ಮನ್ನಾ ಮಾಡಲೇಕೆ ಆಗಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರದಂತೆ ಕೇಂದ್ರ ಸರ್ಕಾರ ಕೂಡ ಸಾಲ ಮನ್ನಾ ಮಾಡಲಿ ಎಂದು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದೆಂದು ಹೇಳಿದರು.
ಜಿ.ಪಂ ಸದಸ್ಯ ರವಿಗೌಡ ಪಾಟೀಲ, ತಾಲೂಕು ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ದೇವು ಜಾನು ಪಾಟೀಲ ತಾ.ಪಂ ಸದಸ್ಯ ಜ್ಞಾನದೇವ ಗುಡಿಯಾಳ, ರಮೇಶ ರಾಯ್ಕರ, ಗ್ರಾ.ಪಂ ಅಧ್ಯಕ್ಷ ಬಸವರಾಜ ನಡುವಿನಮನಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ ಸಾಳುಂಕೆ, ಸಿದ್ದು ಹಡಪದ ಮುಂತಾದವರು ಉಪಸ್ಥಿತರಿದ್ದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ
ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!